Yashaswini Card: ಹೊಸ ಸದಸ್ಯರ ನೋಂದಣಿ ದಿನಾಂಕ ವಿಸ್ತರಣೆ
ಬೆಂಗಳೂರು, ಮಾರ್ಚ್, 02: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ರಾಜ್ಯದ ಸರ್ಕಾರವು ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿದ್ದು, 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ನೀಡಿದ್ದು, ಸದಸ್ಯರ ನೋಂದಾವಣೆಗೆ ಫೆಬ್ರವರಿ 28 ಕೊನೆಯ ದಿನಾಂಕವಾಗಿತ್ತು. ಆದರೆ ಯೋಜನೆಗೆ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುಕೂಲ ಆಗುವಂತೆ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅಡಿಯಲ್ಲಿ ಸುಮಾರು 30ಲಕ್ಷಕ್ಕೂ ಅಧಿಕ ಸದಸ್ಯರ ನೋಂದಣಿ ಗುರಿ ಹೊಂದಿದ್ದಾರೆ. ಆದರೆ ಸದಸ್ಯರ ನೋಂದಣಿ ನಿರೀಕ್ಷಿಸಿದ ಮಟ್ಟದಲ್ಲಿ ಸಾಧ್ಯವಾಗಿಲ್ಲ. ಈ ಅವಧಿಯಲ್ಲಿ ಎಲ್ಲಾ ಸಂಘದ ಸದಸ್ಯರುಗಳ ನೋಂದಣಿ ಸಾದ್ಯ ಆಗುವುದಿಲ್ಲ ಎಂದು ಹಾಗೂ ಅನೇಕ ಸಹಕಾರಿ ಸಂಘಗಳು, ಸದಸ್ಯರುಗಳು, ಶಾಸಕರು, ವಿಧಾನಸಭೆ ಹಾಗೂ ಪರಿಷತ್ನ ಸದಸ್ಯರುಗಳೂ ಕೂಡ ಯೋಜನೆಯ ನೋದಣಿಯ ಅವಧಿಯನ್ನು ವಿಸ್ತರಣೆ ಮಾಡುವಂತೆ ಈಗಾಗಲೇ ಮನವಿ ಸಲ್ಲಿಕೆ ಮಾಡುತ್ತಾರೆ.
ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿ ಆಗಬಹುದಾಗಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications