Yashaswini Card: ಹೊಸ ಸದಸ್ಯರ ನೋಂದಣಿ ದಿನಾಂಕ ವಿಸ್ತರಣೆ
ಬೆಂಗಳೂರು, ಮಾರ್ಚ್, 02: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರ ನೋಂದಣಿಗಾಗಿ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ ಯಶಸ್ವಿನಿ ಕಾರ್ಡ್ ಮಾಡಿಸದೆ ಇರುವವರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ರಾಜ್ಯದ ಸರ್ಕಾರವು ಈ ಹಿಂದೆ ಇದ್ದ ಯಶಸ್ವಿನಿ ಆರೋಗ್ಯ ಯೋಜನೆಯನ್ನು ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿದ್ದು, 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಅವಕಾಶ ನೀಡಿದ್ದು, ಸದಸ್ಯರ ನೋಂದಾವಣೆಗೆ ಫೆಬ್ರವರಿ 28 ಕೊನೆಯ ದಿನಾಂಕವಾಗಿತ್ತು. ಆದರೆ ಯೋಜನೆಗೆ ಇನ್ನೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸಿಕೊಳ್ಳಲು ಅನುಕೂಲ ಆಗುವಂತೆ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಅಡಿಯಲ್ಲಿ ಸುಮಾರು 30ಲಕ್ಷಕ್ಕೂ ಅಧಿಕ ಸದಸ್ಯರ ನೋಂದಣಿ ಗುರಿ ಹೊಂದಿದ್ದಾರೆ. ಆದರೆ ಸದಸ್ಯರ ನೋಂದಣಿ ನಿರೀಕ್ಷಿಸಿದ ಮಟ್ಟದಲ್ಲಿ ಸಾಧ್ಯವಾಗಿಲ್ಲ. ಈ ಅವಧಿಯಲ್ಲಿ ಎಲ್ಲಾ ಸಂಘದ ಸದಸ್ಯರುಗಳ ನೋಂದಣಿ ಸಾದ್ಯ ಆಗುವುದಿಲ್ಲ ಎಂದು ಹಾಗೂ ಅನೇಕ ಸಹಕಾರಿ ಸಂಘಗಳು, ಸದಸ್ಯರುಗಳು, ಶಾಸಕರು, ವಿಧಾನಸಭೆ ಹಾಗೂ ಪರಿಷತ್ನ ಸದಸ್ಯರುಗಳೂ ಕೂಡ ಯೋಜನೆಯ ನೋದಣಿಯ ಅವಧಿಯನ್ನು ವಿಸ್ತರಣೆ ಮಾಡುವಂತೆ ಈಗಾಗಲೇ ಮನವಿ ಸಲ್ಲಿಕೆ ಮಾಡುತ್ತಾರೆ.
ಈ ಯೋಜನೆಯ ಫಲಾನುಭವಿಯಾಗಲು ಕನಿಷ್ಟ 3 ತಿಂಗಳು ಮುಂಚಿತ ಅರ್ಹ ಗ್ರಾಮೀಣ ಸಹಕಾರ ಸಂಘವೊಂದರ ಸದಸ್ಯರಾಗಿರಬೇಕು. ಅಲ್ಲದೇ ಗ್ರಾಮೀಣ ಸಹಕಾರ ಸಂಘ/ಬ್ಯಾಂಕುಗಳೊಡನೆ ವ್ಯವಹರಿಸುತ್ತಿರುವ ಗ್ರಾಮೀಣ ಸ್ತ್ರೀಶಕ್ತಿ ಗುಂಪು, ಸ್ವ-ಸಹಾಯ ಗುಂಪಿನ ಸದಸ್ಯರು ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಯೋಜನೆಯ ಫಲಾನುಭವಿ ಆಗಬಹುದಾಗಿದೆ.
-
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications