ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ: ಪ್ರತಾಪ್ ಸಿಂಹ ಹೀಗೆ ಹೇಳಿದ್ಯಾಕೆ?
ಮೈಸೂರು, ಜನವರಿ 09: ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಪ್ರತಾಪ್ ಸಿಂಹ, ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್ ಕೊಟ್ಟಿದ್ದಾರೆ.
ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಾನು ಖಂಡಿತವಾಗಿಯೂ ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ.

ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ಗೆ ಗುತ್ತಿಗೆ ಪಡೆಯುವವರು ನ್ಯಾಷನಲ್ ಲೀಡರ್ ಎಂದು ಟೀಕಿಸಿದ ಅವರು, ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್, ತಾನು ಹೇಳಿದ ವರ್ಗಾವಣೆ ಲಿಸ್ಟ್ಗೆ ಸಹಿ ಮಾಡಿ ಅಂತ ಮುಖ್ಯಮಂತ್ರಿ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್ ಎಂದು ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ರಾಮನ ಪೇಟೆಂಟ್ ಅನ್ನು ಬಿಜೆಪಿಗೆ ಕೊಟ್ಟಿದ್ದೇ ಕಾಂಗ್ರೆಸ್ ಎಂಬ ಕೈ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಪ್ರತಾಪ್ ಸಿಂಹ ಅವರು, ರಾಮನನ್ನು ಕಾಂಗ್ರೆಸಿಗರೆ ಭಕ್ತಿ ಭಾವದಿಂದ ಪೂಜಿಸಿದ್ದರೆ ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು? ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟಾ ಎಂದು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ ? ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು.
ಅಯೋಧ್ಯೆ ಮಂತ್ರಾಕ್ಷತೆಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ ಹೋಗುವುದು ಬಿಡುವುದು ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications