ವರ್ಷಾಂತ್ಯ ವಿಶೇಷ : 2015ರ ಏಪ್ರಿಲ್ ಹಿನ್ನೋಟ
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ : ಏಪ್ರಿಲ್ 2 : ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಏಪ್ರಿಲ್ 2ರಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಿತು. ಕರ್ನಾಟಕದಲ್ಲಿ 1982, 1993, 1999, 2008, 2015 ಸೇರಿ ಒಟ್ಟು 5 ಬಾರಿ ಕಾರ್ಯಕಾರಣಿ ಸಭೆ ನಡೆದಿದೆ.
ಸರ್ಕಾರದಿಂದ ಜಾತಿ ಗಣತಿ : ಏಪ್ರಿಲ್ 11 : ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಏಪ್ರಿಲ್ 11 ರಿಂದ 30 ರವರೆಗೆ ನಡೆಯಿತು. ಈ ಸಮೀಕ್ಷೆ ಮೂಲಕ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಸೇರಿದ ವ್ಯಕ್ತಿಗಳ ಸಾಮಾಜಿಕ, ಶೈಕ್ಷಣಿಕ ಸ್ಥಿತಿ-ಗತಿ, ಔದ್ಯೋಗಿಕ-ಆರ್ಥಿಕ ಮಾಹಿತಿಗಳನ್ನು ಸಂಗ್ರಹಣೆ ಮಾಡಲಾಯಿತು. [ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]

ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭ : ಏಪ್ರಿಲ್ 12 : ಬೆಂಗಳೂರು-ಹುಬ್ಬಳ್ಳಿ ನಡುವಿನ ವಿಮಾನಯಾನ ಸೇವೆವೆ ಏರ್ ಪೆಗಾಸಸ್ ಚಾಲನೆ ನೀಡಿತು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಏರ್ ಪೆಗಾಸಸ್ ವಿಮಾನಯಾನ ಸೇವೆಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. [ವರ್ಷಾಂತ್ಯ ವಿಶೇಷ : 2015ರ ಜನವರಿ ಹಿನ್ನೋಟ]
ಕಾವೇರಿಗಾಗಿ ಕರ್ನಾಟಕ ಬಂದ್ : ಏಪ್ರಿಲ್ 18 : ಕುಡಿಯುವ ನೀರಿಗಾಗಿ ಕರ್ನಾಟಕ ಸರ್ಕಾರ ಆರಂಭಿಸಲಿರುವ ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಕ್ರಮ ಖಂಡಿಸಿ ಏ.18ರಂದು 'ಕನ್ನಡ ಒಕ್ಕೂಟ' ಹೆಸರಿನಲ್ಲಿ ಕರ್ನಾಟಕ ಬಂದ್ ನಡೆಸಿತು. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. [ಮೇಕೆದಾಟು ಯೋಜನೆ ವಿವಾದ ಏಕೆ, ಏನು?]
ಬದನವಾಳು ಸತ್ಯಾಗ್ರಹ : ಏಪ್ರಿಲ್ 19 : 'ಯಂತ್ರ ನಾಗರೀಕತೆ ನಿಗ್ರಹಿಸೋಣ, ಶ್ರಮ ಸಹಿತ ಸರಳ ಬದುಕನ್ನು ಪೋಷಿಸೋಣ' ಎಂಬ ಘೋಷಣೆಯೊಂದಿಗೆ ಏಪ್ರಿಲ್ 19ರಂದು ಬದನವಾಳು ಗ್ರಾಮದಲ್ಲಿ 'ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶ' ನಡೆಯಿತು. ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಈ ಸಮಾವೇಶಕ್ಕೆ ಬೆಂಬಲ ನೀಡಿದರು. ಮೈಸೂರು ಜಿಲ್ಲೆಯ ದಕ್ಷಿಣ ತುದಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಅಂಟಿಕೊಡಂತೆ ಬದನವಾಳು ಗ್ರಾಮವಿದೆ.

ಐಐಟಿ ಸ್ಥಾಪನೆಗೆ ಮೂರು ಜಿಲ್ಲೆ ಆಯ್ಕೆ : ಏಪ್ರಿಲ್ 25 : ಕರ್ನಾಟಕದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮೂರು ಜಿಲ್ಲೆಗಳನ್ನು ಗುರುತಿಸಿತು. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ರಾಯಚೂರು, ಧಾರವಾಡ, ಮೈಸೂರು ಜಿಲ್ಲೆಗಳನ್ನು ಐಐಟಿ ಸ್ಥಾಪನೆಗೆ ಗುರುತಿಸಲಾಗಿದೆ ಎಂದು ಹೇಳಿದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು.
ಮೆಟ್ರೋ ಸಂಚಾರ ಆರಂಭ : ಏಪ್ರಿಲ್ 29 : ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವಿನ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಮೇ 1 ರಂದು ಚಾಲನೆ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ನಾಗಸಂದ್ರ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಈ ಮಾರ್ಗದಲ್ಲಿ ಗರಿಷ್ಠ 23 ರೂ., ಕನಿಷ್ಠ 10 ರೂ. ಪ್ರಯಾಣದರವಿದೆ. [ನಾಗಸಂದ್ರ-ಪೀಣ್ಯ ಇಂಡಸ್ಟ್ರಿ ದರ ಪಟ್ಟಿ]

-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications