ವರ್ಷಾಂತ್ಯ ವಿಶೇಷ : 2015ರ ಏಪ್ರಿಲ್ ಹಿನ್ನೋಟ
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ : ಏಪ್ರಿಲ್ 2 : ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಏಪ್ರಿಲ್ 2ರಿಂದ ಮೂರು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಿತು. ಕರ್ನಾಟಕದಲ್ಲಿ 1982, 1993, 1999, 2008, 2015 ಸೇರಿ ಒಟ್ಟು 5 ಬಾರಿ ಕಾರ್ಯಕಾರಣಿ ಸಭೆ ನಡೆದಿದೆ.
ಸರ್ಕಾರದಿಂದ ಜಾತಿ ಗಣತಿ : ಏಪ್ರಿಲ್ 11 : ಸರ್ಕಾರದ ಮಹತ್ವಾಕಾಂಕ್ಷೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಏಪ್ರಿಲ್ 11 ರಿಂದ 30 ರವರೆಗೆ ನಡೆಯಿತು. ಈ ಸಮೀಕ್ಷೆ ಮೂಲಕ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಸೇರಿದ ವ್ಯಕ್ತಿಗಳ ಸಾಮಾಜಿಕ, ಶೈಕ್ಷಣಿಕ ಸ್ಥಿತಿ-ಗತಿ, ಔದ್ಯೋಗಿಕ-ಆರ್ಥಿಕ ಮಾಹಿತಿಗಳನ್ನು ಸಂಗ್ರಹಣೆ ಮಾಡಲಾಯಿತು. [ಜಾತಿ ಗಣತಿ : ಏಕೆ, ಏನು, ಇದೆಲ್ಲಾ ಬೇಕೆ?]

ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭ : ಏಪ್ರಿಲ್ 12 : ಬೆಂಗಳೂರು-ಹುಬ್ಬಳ್ಳಿ ನಡುವಿನ ವಿಮಾನಯಾನ ಸೇವೆವೆ ಏರ್ ಪೆಗಾಸಸ್ ಚಾಲನೆ ನೀಡಿತು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣದಲ್ಲಿ ಏರ್ ಪೆಗಾಸಸ್ ವಿಮಾನಯಾನ ಸೇವೆಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. [ವರ್ಷಾಂತ್ಯ ವಿಶೇಷ : 2015ರ ಜನವರಿ ಹಿನ್ನೋಟ]
ಕಾವೇರಿಗಾಗಿ ಕರ್ನಾಟಕ ಬಂದ್ : ಏಪ್ರಿಲ್ 18 : ಕುಡಿಯುವ ನೀರಿಗಾಗಿ ಕರ್ನಾಟಕ ಸರ್ಕಾರ ಆರಂಭಿಸಲಿರುವ ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡು ಕ್ರಮ ಖಂಡಿಸಿ ಏ.18ರಂದು 'ಕನ್ನಡ ಒಕ್ಕೂಟ' ಹೆಸರಿನಲ್ಲಿ ಕರ್ನಾಟಕ ಬಂದ್ ನಡೆಸಿತು. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. [ಮೇಕೆದಾಟು ಯೋಜನೆ ವಿವಾದ ಏಕೆ, ಏನು?]
ಬದನವಾಳು ಸತ್ಯಾಗ್ರಹ : ಏಪ್ರಿಲ್ 19 : 'ಯಂತ್ರ ನಾಗರೀಕತೆ ನಿಗ್ರಹಿಸೋಣ, ಶ್ರಮ ಸಹಿತ ಸರಳ ಬದುಕನ್ನು ಪೋಷಿಸೋಣ' ಎಂಬ ಘೋಷಣೆಯೊಂದಿಗೆ ಏಪ್ರಿಲ್ 19ರಂದು ಬದನವಾಳು ಗ್ರಾಮದಲ್ಲಿ 'ಸುಸ್ಥಿರ ಬದುಕಿನ ರಾಷ್ಟ್ರೀಯ ಸಮಾವೇಶ' ನಡೆಯಿತು. ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಈ ಸಮಾವೇಶಕ್ಕೆ ಬೆಂಬಲ ನೀಡಿದರು. ಮೈಸೂರು ಜಿಲ್ಲೆಯ ದಕ್ಷಿಣ ತುದಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಅಂಟಿಕೊಡಂತೆ ಬದನವಾಳು ಗ್ರಾಮವಿದೆ.

ಐಐಟಿ ಸ್ಥಾಪನೆಗೆ ಮೂರು ಜಿಲ್ಲೆ ಆಯ್ಕೆ : ಏಪ್ರಿಲ್ 25 : ಕರ್ನಾಟಕದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮೂರು ಜಿಲ್ಲೆಗಳನ್ನು ಗುರುತಿಸಿತು. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ರಾಯಚೂರು, ಧಾರವಾಡ, ಮೈಸೂರು ಜಿಲ್ಲೆಗಳನ್ನು ಐಐಟಿ ಸ್ಥಾಪನೆಗೆ ಗುರುತಿಸಲಾಗಿದೆ ಎಂದು ಹೇಳಿದರು. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು.
ಮೆಟ್ರೋ ಸಂಚಾರ ಆರಂಭ : ಏಪ್ರಿಲ್ 29 : ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಡುವಿನ ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಮೇ 1 ರಂದು ಚಾಲನೆ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ನಾಗಸಂದ್ರ ನಿಲ್ದಾಣದಲ್ಲಿ ನಮ್ಮ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಈ ಮಾರ್ಗದಲ್ಲಿ ಗರಿಷ್ಠ 23 ರೂ., ಕನಿಷ್ಠ 10 ರೂ. ಪ್ರಯಾಣದರವಿದೆ. [ನಾಗಸಂದ್ರ-ಪೀಣ್ಯ ಇಂಡಸ್ಟ್ರಿ ದರ ಪಟ್ಟಿ]

-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications