ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ಪ್ರಕರಣಗಳಲ್ಲಿ ಬಿ.ಎಸ್.ಯಡಿಯೂರಪ್ಪ ಖುಲಾಸೆ

|
Google Oneindia Kannada News

ಬೆಂಗಳೂರು, ನವೆಂಬರ್ 29 : ಎರಡು ಚುನಾವಣೆ ನೀತಿ ಸಂಹಿತೆ ಪ್ರಕರಣದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖುಲಾಸೆಗೊಂಡಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು.

ಗುರುವಾರ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಅವರನ್ನು ಖುಲಾಸೆಗೊಳಿಸಿದೆ. ಸಾಕ್ಷ್ಯಧಾರಗಳ ಕೊರತೆ ಹಿನ್ನಲೆಯಲ್ಲಿ ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯೂರ್ತಿ ಬಿ.ವಿ.ಪಾಟೀಲ್ ಹೇಳಿದ್ದಾರೆ.

ಖಾಸಗಿ ಭೇಟಿ ಬಳಿಕ ಡಿಕೆಶಿ-ಬಿಎಸ್‌ವೈ ಮಾಧ್ಯಮಗಳಿಗೆ ಹೇಳಿದ್ದೇನು?ಖಾಸಗಿ ಭೇಟಿ ಬಳಿಕ ಡಿಕೆಶಿ-ಬಿಎಸ್‌ವೈ ಮಾಧ್ಯಮಗಳಿಗೆ ಹೇಳಿದ್ದೇನು?

ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಐಪಿಸಿ ಸೆಕ್ಷನ್ 171 ಅಡಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಇಂದು ನ್ಯಾಯಾಲಯಕ್ಕೆ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗಿದ್ದರು.

ಧರಣಿ ಕೂತಿದ್ದ ಬಿಎಸ್ವೈ ಅವರ ಪಾದಮುಟ್ಟಿ, ಎಬ್ಬಿಸಿ ಕೂರಿಸಿದ್ದ ಅಂಬರೀಶ್ಧರಣಿ ಕೂತಿದ್ದ ಬಿಎಸ್ವೈ ಅವರ ಪಾದಮುಟ್ಟಿ, ಎಬ್ಬಿಸಿ ಕೂರಿಸಿದ್ದ ಅಂಬರೀಶ್

Yeddyurappa acquitted in 2 cases

ಗುಂಡ್ಲುಪೇಟೆ ಉಪ ಚುನಾವಣೆ ವೇಳೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಹಣ ನೀಡಿದ ಪ್ರಕರಣ, ಬಿಜೆಪಿಗೆ ಮತ ನೀಡುವಂತೆ ಪ್ರಮಾಣ ಮಾಡಿಸಿಕೊಂಡಿದ್ದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಯಿಂದ ಪ್ರಭಾರಿಗಳ ನೇಮಕಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಯಿಂದ ಪ್ರಭಾರಿಗಳ ನೇಮಕ

ನ್ಯಾಯಮೂರ್ತಿ ಬಿ.ವಿ.ಪಾಟೀಲ್ ಅವರು ಸಾಕ್ಷ್ಯಧಾರಗಳ ಕೊರತೆ ಹಿನ್ನಲೆಯಲ್ಲಿ ಎರಡು ಪ್ರಕರಣಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷರಿಗೆ ರಿಲೀಫ್ ಸಿಕ್ಕಿದೆ.

English summary
Karnataka BJP president B.S.Yeddyurappa acquitted in 2 violation of the model code of conduct case. Case registered during Gundlupet and Nanjangud by election time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X