ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಹೆಸರಲ್ಲಿ 'ರಾಮ' ಬದಲು 'ರಾವಣ' ಇರಬೇಕಿತ್ತು!

|
Google Oneindia Kannada News

ತುಮಕೂರು, ಜನವರಿ 11 : 'ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ನನ್ನ ಹೆಸರಿನಲ್ಲಿಯೇ 'ರಾಮ' ಇದ್ದಾನೆ ಎಂದು ಹೇಳುತ್ತಾರೆ. ಅವರ ಹೆಸರಿನಲ್ಲಿ ರಾಮನ ಬದಲಾಗಿ 'ರಾವಣ' ಇರಬೇಕಿತ್ತು' ಎಂದು ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.

ತುಮಕೂರಿನ ಶಿರಾದಲ್ಲಿ ಪಕ್ಷದ ಪರಿವರ್ತನಾ ಯಾತ್ರೆ ಸಮಾವೇಶ ಉದ್ದೇಶಿಸಿ ಗುರುವಾರ ಯಡಿಯೂರಪ್ಪ ಮಾತನಾಡಿದರು. 'ದೇಶದ 19 ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ನಾಲ್ಕು ತಿಂಗಳು ಕಳೆದರೆ ರಾಜ್ಯದಲ್ಲಿಯೂ ಅಧಿಕಾರಕ್ಕೆ ಬರಲಿದೆ' ಎಂದರು.

'ಬಿಜೆಪಿ ಸೋಲುವ ಭೀತಿಯಿಂದ ಪದೇಪದೇ ರಾಜ್ಯಕ್ಕೆ ಬರುತ್ತಿರುವ ಅಮಿತ್ ಶಾ''ಬಿಜೆಪಿ ಸೋಲುವ ಭೀತಿಯಿಂದ ಪದೇಪದೇ ರಾಜ್ಯಕ್ಕೆ ಬರುತ್ತಿರುವ ಅಮಿತ್ ಶಾ'

Sira

'ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ 6 ರಾಜ್ಯಗಳಲ್ಲಿ ಮಾತ್ರ ಪಕ್ಷ ಅಧಿಕಾರಲ್ಲಿತ್ತು. ಈಗ 19 ರಾಜ್ಯದಲ್ಲಿ ಅಧಿಕಾರಲ್ಲಿದೆ. ಮೋದಿ ಅಭಿವೃದ್ಧಿ ಕಾರ್ಯಗಳನ್ನು ದೇಶದ ಜನರ ಮೆಚ್ಚಿದ್ದಾರೆ. ಸಿದ್ದರಾಮಯ್ಯ ಮಾತ್ರ ಬಿಜೆಪಿಯನ್ನು ಉಗ್ರಗಾಮಿ ಎಂದು ಟೀಕಿಸುತ್ತಿದ್ದಾರೆ' ಎಂದರು.

ಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್‌ವೈ ಟ್ವೀಟ್ ಬಾಣಜನ ಚಪ್ಪಾಳೆ ತಟ್ಟಿದ್ದು ಏಕೆ? ಸಿದ್ದರಾಮಯ್ಯಗೆ ಬಿಎಸ್‌ವೈ ಟ್ವೀಟ್ ಬಾಣ

'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕಾಡಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗುತ್ತದೆ. ರಾಜ್ಯದಲ್ಲಿ 28 ಲಕ್ಷಕ್ಕಿಂತ ಅಧಿಕ ಸಂಖ್ಯೆಯಲ್ಲಿರುವ ಈ ಸಮುದಾಯ ಸಾಮಾಜಿಕ, ಆರ್ಥಿಕ ಉನ್ನತಿಗೆ ಸರ್ಕಾರ ಶ್ರಮಿಸಲಿದೆ' ಎಂದು ಯಡಿಯೂರಪ್ಪ ಹೇಳಿದರು.

English summary
Karnataka BJP president B.S.Yeddyurappa addressed parivarthana yatra in Sira, Tumakuru. In the rally Yeddyurappa said BJP will come to power in Karnataka in 4 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X