ಭಾಲ್ಕಿ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ : ಕಣ್ಣೀರಿಟ್ಟ ಡಿ.ಕೆ.ಸಿದ್ರಾಮ!
Recommended Video

ಬೀದರ್, ಡಿಸೆಂಬರ್ 05 : 'ಭಾಲ್ಕಿ ವಿಧಾನಸಭಾ ಕ್ಷೇತ್ರಕ್ಕೆ 2018ರ ವಿಧಾನಸಭೆ ಚುನಾವಣೆಗೆ ಪ್ರಕಾಶ ಖಂಡ್ರೆ ಅಭ್ಯರ್ಥಿ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಿಜೆಪಿಯ 'ನವ ಕರ್ನಾಟಕ ಪರಿವರ್ತನಾ ಯಾತ್ರೆ'ಯ 24ನೇ ದಿನ ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಬೃಹತ್ ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಯಡಿಯೂರಪ್ಪ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದರು.
ಯಡಿಯೂರಪ್ಪ ಪ್ರಕಾಶ ಖಂಡ್ರೆ ಹೆಸರು ಘೋಷಣೆ ಮಾಡುತ್ತಿದ್ದಂತೆಯೇ ಡಿ.ಕೆ.ಸಿದ್ರಾಮ ಕಣ್ಣೀರು ಹಾಕಿದರು. ಸಿದ್ರಾಮ ಅವರು ಸಹ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2013ರ ಚುನಾವಣೆಯಲ್ಲಿ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸಿದ್ರಾಮ ಅವರು ಸ್ಪರ್ಧಿಸಿದ್ದರು.
ಭಾಲ್ಕಿ ಕ್ಷೇತ್ರ ಸದ್ಯ ಕಾಂಗ್ರೆಸ್ ವಶದಲ್ಲಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿರುವ ಈಶ್ವರ ಖಂಡ್ರೆ ಅವರು ಕ್ಷೇತ್ರದ ಶಾಸಕರು. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದೆ...

ಯಡಿಯೂರಪ್ಪ ಹೇಳಿದ್ದೇನು?
'ವಿಧಾನಸಭಾ ಚುನಾವಣೆಯಲ್ಲಿ ಭಾಲ್ಕಿ ಕ್ಷೇತ್ರಕ್ಕೆ ಬಿಜೆಪಿಯ ಇಬ್ಬರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಸಿದ್ರಾಮ ಮತ್ತು ಪ್ರಕಾಶ ಖಂಡ್ರೆ ಅವರಲ್ಲಿ ಮಾಜಿ ಶಾಸಕ ಪ್ರಕಾಶ ಖಂಡ್ರೆ ಈ ಕ್ಷೇತ್ರದ ಅಭ್ಯರ್ಥಿಗಳಾಗುವರು' ಎಂದು ಯಡಿಯೂರಪ್ಪ ಪರಿವರ್ತನಾ ಯಾತ್ರೆ ಸಮಾವೇಶದಲ್ಲಿ ಘೋಷಣೆ ಮಾಡಿದರು.

ಸಹೋದರರಿಗೆ ಸಹಾಯ ಮಾಡುವರು
ಕ್ಷೇತ್ರದ ಟಿಕೆಟ್ಗೆ ಡಿ.ಕೆ.ಸಿದ್ರಾಮ ಅವರ ಹೆಸರು ಕೇಳಿಬಂದಿತ್ತು. ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ, 'ಡಿ.ಕೆ.ಸಿದ್ರಾಮ ಅವರು ಪ್ರಕಾಶ ಖಂಡ್ರೆ ಅವರಿಗೆ ಸಹೋದರರಂತೆ ಸಹಾಯ ಮಾಡುವರು. ಅವರನ್ನು ಗೆಲ್ಲಿಸಲು ಶ್ರಮವಹಿಸಿ ಕೆಲಸ ಮಾಡಬೇಕು' ಎಂದು ಘೋಷಿಸಿದರು.

ಕಣ್ಣೀರು ಹಾಕಿದ ಡಿ.ಕೆ.ಸಿದ್ರಾಮ
ಪ್ರಕಾಶ ಖಂಡ್ರೆ ಅವರ ಹೆಸರು ಘೋಷಣೆ ಮಾಡುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಯಾಗಿದ್ದ ಡಿ.ಕೆ.ಸಿದ್ರಾಮ ಕಣ್ಣೀರು ಹಾಕಿದರು. ಯಡಿಯೂರಪ್ಪ ಅವರು, 'ಪ್ರಕಾಶ ಖಂಡ್ರೆ ಅವರ ಗೆಲುವಿಗೆ ಕಾರಣವಾದವರಿಗೆ ಉತ್ತಮ ಸ್ಥಾನ-ಮಾನ ನೀಡಲಾಗುತ್ತದೆ' ಎಂದು ಸಮಾವೇಶದಲ್ಲಿ ಭರವಸೆ ನೀಡಿದರು.

ಈಶ್ವರ ಖಂಡ್ರೆ ಗೆದ್ದಿದ್ದರು
2013ರ ಚುನಾವಣೆಯಲ್ಲಿ ಭಾಲ್ಕಿ ಕ್ಷೇತ್ರದಲ್ಲಿ ಡಿ.ಕೆ.ಸಿದ್ರಾಮ ಅವರು ಕೆಜೆಪಿ ಅಭ್ಯರ್ಥಿಯಾಗಿ, ಪ್ರಕಾಶ ಖಂಡ್ರೆ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಇಬ್ಬರೂ ಸೋತಿದ್ದರು. ಕಾಂಗ್ರೆಸ್ನ ಈಶ್ವರ ಖಂಡ್ರೆ ಜಯಗಳಿಸಿದ್ದರು. (ಚಿತ್ರ : ಈಶ್ವರ ಖಂಡ್ರೆ)

ಹಿಂದಿನ ಚುನಾವಣೆ ಫಲಿತಾಂಶ
ಈಶ್ವರ ಖಂಡ್ರೆ : 58,012 ಮತಗಳು
ಡಿ.ಕೆ.ಸಿದ್ರಾಮ : 48,343 ಮತಗಳು
ಪ್ರಕಾಶ್ ಖಂಡ್ರೆ : 29,694 ಮತಗಳು
ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications