ಗೊಂದಲದ ನಡುವೆಯೇ ಔರಾದ್ ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ!
ಬೀದರ್, ಡಿಸೆಂಬರ್. 08 : ಬಂಡಾಯದ ಬಿಸಿಯ ನಡುವೆಯೇ ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಅಭ್ಯರ್ಥಿಯನ್ನು ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಧನಾಜಿ ಜಾಧವ ಅವರು ಕ್ಷೇತ್ರದ ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದರು.
ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಯ 27ನೇ ದಿನ ಬೀದರ್ ಜಿಲ್ಲೆಯ ಔರಾದ್ನಲ್ಲಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ ಹಾಲಿ ಶಾಸಕ ಪ್ರಭು ಚವ್ಹಾಣ್ ಅವರು 2018ರ ಚುನಾವಣೆ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.
ಔರಾದ್ನಲ್ಲಿ ನಡೆದ ಈ ಸಮಾವೇಶ ಹಲವು ಗೊಂದಲಗಳಿಗೂ ಕಾರಣವಾಯಿತು, ಕಳೆದ ಬಾರಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಧನಾಜಿ ಜಾಧವ ಯಾತ್ರೆಯ ಸಮಾವೇಶಕ್ಕಾಗಿ ಪ್ರತ್ಯೇಕ ವೇದಿಕೆ ನಿರ್ಮಾಣ ಮಾಡಿದ್ದರು. ವೇದಿಕೆಗೆ ಧನಾಜಿ ಜಾಧವ ಆಗಮಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತೊಡಿಸಿದರು.
ಕೆಜೆಪಿ-ಬಿಜೆಪಿ ನಾಯಕರು ಎಂಬ ಪ್ರಶ್ನೆಯಿಂದಾಗಿ ಸಮಾವೇಶದಲ್ಲಿ ಗೊಂದಲ ಉಂಟಾಗಿತ್ತು. 'ಕೆಜೆಪಿ-ಬಿಜೆಪಿ ಎಂದು ಗೊಂದಲ ಸೃಷ್ಟಿ ಮಾಡುವವರನ್ನು ಪಕ್ಷದಿಂದ ಹೊರ ಹಾಕಲಾಗುತ್ತದೆ' ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಔರಾದ್ನಲ್ಲಿ ಪರಿವರ್ತನಾ ಯಾತ್ರೆ
ಶಾಸಕ ಪ್ರಭು ಚವ್ಹಾಣ್, ಬಿ.ಎಸ್.ಯಡಿಯೂರಪ್ಪ ಅಮರೇಶ್ವರ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಆಗಮಿಸದರು. ಹಿಂದೆ ಕೆಜೆಪಿಯಲ್ಲಿದ್ದ ಧನಾಜಿ ಜಾಧವ್ ಅವರು ವೇದಿಕೆಗೆ ಆಗಮಿಸಿದರು. ಆಗ ಕೆಲವು ಬಿಜೆಪಿ ಕಾರ್ಯಕರ್ತರು ಗದ್ದಲವೆಬ್ಬಿಸಿದರು. ಈ ಸಂದರ್ಭದಲ್ಲಿ ಬಿಜೆಪಿ-ಕೆಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಯಡಿಯೂರಪ್ಪ ಅವರು ಹೇಳಿದ್ದೇನು?
'ಕೆಜೆಪಿ-ಬಿಜೆಪಿ ಎಂದು ಗೊಂದಲ ಎಬ್ಬಿಸಿದರೆ ಪಕ್ಷದಿಂದ ಹೊರಹಾಕುವುದಾಗಿ' ಯಡಿಯೂರಪ್ಪ ಎಚ್ಚರಿಕೆ ನೀಡಿದರು. 'ಎಲ್ಲರೂ ಒಂದಾಗಿ ಕೆಲಸ ಮಾಡಿ, ರಾಜ್ಯದಲ್ಲಿ ಮುಂದೆ ನಮ್ಮ ಸರ್ಕಾರ ಬರಲಿದೆ. ನೀವು ಏಕೆ ಹೀಗೆ ಕಿತ್ತಾಡಿಕೊಳ್ಳುತ್ತೀರಿ?' ಎಂದು ಯಡಿಯೂರಪ್ಪ ಪ್ರಶ್ನಿಸಿದರು.

ಅಭ್ಯರ್ಥಿ ಘೋಷಣೆ ಮಾಡಿದ ಯಡಿಯೂರಪ್ಪ
ಸಮಾವೇಶದಲ್ಲಿ ಮಾತನಾಡಿದ ಯಡಿಯೂರಪ್ಪ 'ಶಾಸಕ ಪ್ರಭು ಚೌವ್ಹಾಣ್ ಅವರು ನಮ್ಮ ಪಕ್ಷದ ಮುಂದಿನ ವಿಧಾನಸಭೆ ಚುನಾವಣೆ ಅಭ್ಯರ್ಥಿ' ಎಂದು ಘೋಷಣೆ ಮಾಡಿದರು.

ಕ್ಷೇತ್ರದ 2013ರ ಫಲಿತಾಂಶ
2013ರಲ್ಲಿ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಮತ ವಿಂಗಡನೆಯಾಗಿತ್ತು. ಪ್ರಭು ಬಿ.ಚವ್ಹಾಣ್ 61,826 ಮತಗಳನ್ನು ಪಡೆದು ಜಯಗಳಿಸಿದ್ದರು. ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಧನಾಜಿ ಜಾಧವ್ 38,635 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗಾಯಕವಾಡ್ ವಿಜಯಕುಮಾರ್ 15,456 ಮತ ಪಡೆದಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications