ಅಮಿತ್ ಶಾ ಸೂಚನೆ ಮೀರಿ, ಅಭ್ಯರ್ಥಿ ಘೋಷಿಸಿದ ಯಡಿಯೂರಪ್ಪ!
ಬಳ್ಳಾರಿ, ಜನವರಿ 05 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯನ್ನು ಮೀರಿ ಬಿ.ಎಸ್.ಯಡಿಯೂರಪ್ಪ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರಕ್ಕೆ ನೇಮಿರಾಜ ನಾಯ್ಕ್ 2018ರ ಚುನಾವಣೆ ಅಭ್ಯರ್ಥಿಯಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಗುರುವಾರ ಬಿಜೆಪಿಯ ಪರಿವರ್ತನಾ ಯಾತ್ರೆ ನಡೆಯಿತು. ಸಮಾವೇಶದಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಅಭ್ಯರ್ಥಿ ಘೋಷಣೆ ಮಾಡಿದರು.
ಕಳೆದ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪರಿವರ್ತನಾ ಯಾತ್ರೆಯಲ್ಲಿ ಯಾವ ನಾಯಕರು ಅಭ್ಯರ್ಥಿ ಘೋಷಣೆ ಮಾಡಬಾರದು ಎಂದು ಸೂಚಿಸಿದ್ದರು. ಆದರೆ, ಯಡಿಯೂರಪ್ಪ ಈ ಸೂಚನೆ ಮೀರಿ ಅಭ್ಯರ್ಥಿ ಘೋಷಣೆ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಹಗರಿಬೊಮ್ಮನಹಳ್ಳಿ ಕ್ಷೇತ್ರ ಸದ್ಯ ಜೆಡಿಎಸ್ ವಶದಲ್ಲಿದೆ. ಶಾಸಕ ಭೀಮಾ ನಾಯಕ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ ಪಕ್ಷದಿಂದ ಅಮಾನತುಗೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಲಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಯಡಿಯೂರಪ್ಪ ಹೇಳಿದ್ದೇನು?
ಸಮಾವೇಶದಲ್ಲಿ ಮತನಾಡಿದ ಯಡಿಯೂರಪ್ಪ, 'ಕಳೆದ ಚುನಾವಣೆಯಲ್ಲಿ ನಮಗೆ 125 ಮತಗಳ ಅಂತರದಿಂದ ಸೋಲಾಗಿತ್ತು. ಈ ಬಾರಿ ನೇಮಿರಾಜ ನಾಯ್ಕ್ ಅವರನ್ನು 20 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು' ಎಂದು ಮನವಿ ಮಾಡಿದರು.

ಕಳೆದ ಚುನಾವಣೆಯಲ್ಲಿ ಸೋಲು
2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ನೇಮಿರಾಜ ನಾಯಕ್ 51,847 ಮತಗಳನ್ನು ಪಡೆದು ಸೋತಿದ್ದರು. ಜೆಡಿಎಸ್ನಿಂದ ಭೀಮಾ ನಾಯಕ್ 51,972 ಮತಗಳನ್ನು ಪಡೆದು ಗೆದಿದ್ದರು.

ಪಕ್ಷದಿಂದ ಅಮಾನತುಗೊಂಡಿದ್ದಾರೆ
ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಭೀಮಾ ನಾಯಕ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯವು ಸಾಧ್ಯತೆ ಇದೆ. ಏಳು ಜೆಡಿಎಸ್ ಶಾಸಕರು ರಾಹುಲ್ ಗಾಂಧಿ ಸಮ್ಮುಖದಲ್ಲಿ ಶೀಘ್ರವೇ ಪಕ್ಷಕ್ಕೆ ಸೇರಲಿದ್ದಾರೆ.

ಹಲವು ಕಡೆ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ
ಬಿ.ಎಸ್.ಯಡಿಯೂರಪ್ಪ ತುಮಕೂರು ಜಿಲ್ಲೆಯ ತುರುವೇಕರೆ, ತಿಪಟೂರಿನಲ್ಲಿ ಮತ್ತು ಬೀದರ್ ಜಿಲ್ಲೆಯ ಭಾಲ್ಕಿ, ಬೀದರ್, ಔರಾದ್ ಹಾಗೂ ದಾವಣಗೆರೆಯ ಹೊನ್ನಾಳಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ.

ಅಭ್ಯರ್ಥಿ ಘೋಷಣೆ ಮಾಡಬಾರದು
ಕಳೆದ ಭಾನುವಾರ ಬೆಂಗಳೂರಿನಲ್ಲಿ ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದ ಅಮಿತ್ ಶಾ, 'ಪರಿವರ್ತನಾ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲಾ ನಾಯಕರು ಇದರಲ್ಲಿ ಪಾಲ್ಗೊಳ್ಳಬೇಕು. ಆದರೆ, ಯಾತ್ರೆಯಲ್ಲಿ ಅಭ್ಯರ್ಥಿ ಘೋಷಿಸಬಾರದು' ಎಂದು ಸೂಚಿಸಿದ್ದರು.

ಹೈಕಮಾಂಡ್ ಘೋಷಿಸಲಿದೆ
ಅಭ್ಯರ್ಥಿಗಳ ಘೋಷಣೆ ಬಗ್ಗೆ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. 'ಎಲ್ಲಿ ಗೊಂದಲವಿಲ್ಲವೋ ಅಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಆದರೆ, ಎರಡು ಸಮೀಕ್ಷೆ ನಡೆದ ಬಳಿಕ ರಾಷ್ಟ್ರೀಯ ನಾಯಕರು ಘೋಷಿಸುವ ಅಭ್ಯರ್ಥಿಗಳು ಅಂತಿಮ' ಎಂದು ಯಡಿಯೂರಪ್ಪ ಹೇಳಿದ್ದದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications