ಮುಂದುವರೆದ ಅಧಿಕಾರಿಗಳ ವರ್ಗಾವಣೆ, ಸಿಎಂ ಆಪ್ತ ಕಾರ್ಯದರ್ಶಿಯಾಗಿ ಹುಕ್ಕೇರಿ
ಬೆಂಗಳೂರು, ಮೇ 17: ಯಡಿಯೂರಪ್ಪ ಅವರು ಮುಖ್ಯ ಮಂತ್ರಿ ಆಗುತ್ತಿದ್ದಂತೆ 5 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಆದೇಶಕ್ಕೆ ಸಹಿ ಮಾಡಿದ್ದರು ಈಗ ಐಎಎಸ್ ಅಧಿಕಾರಿಗಳ ಸರದಿ.
ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರಾಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ವಿ.ಪಿ.ಹುಕ್ಕೇರಿ ಅವರನ್ನು ವರ್ಗಾವಣೆ ಮಾಡಿದ್ದಾರೆ.
ವಿ.ಪಿ.ಹುಕ್ಕೇರಿ ಅವರನ್ನು ಯಡಿಯೂರಪ್ಪ ಅವರು ತಮ್ಮ ಆಪ್ತ ಕಾರ್ಯದರ್ಶಿಯಾಗಿ ಮಾಡಿಕೊಂಡಿದ್ದಾರೆ. ಹುಕ್ಕೇರಿ ಅವರು ಯಡಿಯೂರಪ್ಪ ಅವರ ನಂಬಿಕೆಯ ಅಧಿಕಾರಿ ಎನ್ನಲಾಗಿದೆ.

ಯಡಿಯೂರಪ್ಪ ಅವರು ತಮ್ಮ ನಿಷ್ಠಾವಂತ ಅಧಿಕಾರಿಗಳನ್ನು ತಮಗೆ ಬೇಕಾದ ಆಯಕಟ್ಟಿನ ಜಾಗಗಳಿಗೆ ನಿಯೋಜಿಸಿ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.












Click it and Unblock the Notifications