ಮೌನ ಮುರಿದ ಯಡಿಯೂರಪ್ಪ, 'ಲಿಂಗಾಯತ ಧರ್ಮ' ಚುನಾವಣಾ ಗಿಮಿಕ್
Recommended Video

ಬೆಂಗಳೂರು, ಮಾರ್ಚ್ 22: ರಾಜ್ಯ ಸರಕಾರ ವೀರಶೈವ-ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ಕೋರಿ ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು 'ಚುನಾವಣಾ ಗಿಮಿಕ್' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಪ್ರತ್ಯೇಕ ಧರ್ಮದ ವಿಚಾರದಲ್ಲಿ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಅವರು ಸಿಎಂ ಸಿದ್ದರಾಮಯ್ಯ ಜನರ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಈ ಹಿಂದೆ ಯುಪಿಎ ಸರಕಾರವೇ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ನಿರಾಕರಿಸಿರುವಾಗ ಈಗ ಈ ವಿಚಾರವನ್ನು ಕೈಗೆತ್ತಿಕೊಳ್ಳುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

"ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡು ಸಿದ್ದರಾಮಯ್ಯ ಜನರನ್ನು ಒಡೆಯುತ್ತಿದ್ದಾರೆ. ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನ ಮಾನ ನೀಡಲು ಹೊರಟಿರುವುದು ಚುನಾವಣಾ ಗಿಮಿಕ್. ಇದು ಜನರನ್ನು ಹಾದಿ ತಪ್ಪಿಸುವ ಯತ್ನ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
"ಹಲವು ಸಮುದಾಯಗಳು ಬೇರೆ ಬೇರೆ ಬೇಡಿಕೆಗಳನ್ನು ಹೊಂದಿವೆ. ಎಲ್ಲವನ್ನೂ ಪೂರೈಸಲು ಸಾಧ್ಯವಿದೆಯೇ? ನಿಮ್ಮ ಉದ್ದೇಶ ಏನು? ವಿವಿಧ ಜಾತಿಗಳ ನಡುವಿನ ದ್ವೇಷದ ಬೀಜ ಬಿತ್ತುವುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಾ? ನಿಮಗೆ ನಿಜವಾಗಿಯೂ ಕಾಳಜಿಯಿದ್ದರೆ, ವೀರಶೈವ ಮಹಾಸಭಾದ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇವೆ ಎಂದು ನೀವು ಹೇಳಬಹುದಾಗಿತ್ತು," ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
"ರಾಜಕೀಯ ಲಾಭಕ್ಕಾಗಿ ತೀರಾ ಕೆಳಮಟ್ಟಕ್ಕೆ ಹೇಗೆ ಹೋಗಬಹುದು ಎನ್ನುವುದಕ್ಕೆ ಸಿದ್ದರಾಮಯ್ಯ ಒಂದು ಉದಾಹರಣೆ," ಎಂದು ಯಡಿಯೂರಪ್ಪ ಅಸಮಧಾನ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications