ಯಡಿಯೂರಪ್ಪ ಪಾಸ್ಪೋರ್ಟ್ ವಾಪಸ್ ಕೊಟ್ಟ ಕೋರ್ಟ್
ಬೆಂಗಳೂರು, ಡಿಸೆಂಬರ್ 01 : ಮಾಜಿ ಮುಖ್ಯಮಂತ್ರಿ, ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು ವಿದೇಶ ಪ್ರವಾಸ ಕೈಗೊಳ್ಳಬಹುದು. ಲೋಕಾಯುಕ್ತ ವಿಶೇಷ ನ್ಯಾಯಾಲಯ ಯಡಿಯೂರಪ್ಪ ಅವರ ಪಾಸ್ಪೋರ್ಟ್ಅನ್ನು ಮರಳಿಸಿದೆ.
ಸೋಮವಾರ ಯಡಿಯೂರಪ್ಪ ಅವರ ವಿರುದ್ಧ ವಕೀಲ ಸಿರಾಜಿನ್ ಬಾಷಾ ಸಲ್ಲಿಸಿದ್ದ ನಾಲ್ಕು ದೂರುಗಳನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ. ಮತ್ತು 2012ರಿಂದ ವಶದಲ್ಲಿ ಇಟ್ಟುಕೊಂಡಿದ್ದ ಪಾಸ್ಪೋರ್ಟ್ ಅನ್ನು ವಾಪಸ್ ನೀಡುವಂತೆ ಆದೇಶ ನೀಡಿದೆ. [ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು]

ಎರಡು ವಾರಗಳಿಂದ ಕೋರ್ಟ್ನಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಗುತ್ತಿದೆ. ಕಳೆದ ವಾರ 5 ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳಲ್ಲಿ ಅಂದಿನ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ನೀಡಿದ್ದ ಪೂರ್ವಾನುಮತಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿತ್ತು. [ಯಡಿಯೂರಪ್ಪ ವಿರುದ್ಧದ 4 ದೂರು ರದ್ದು]
ಹೈಕೋರ್ಟ್ ಆದೇಶದ ಪ್ರತಿಯನ್ನು ಬಿಎಸ್ವೈ ಪರ ವಕೀಲರಾದ ಸಿ.ವಿ. ನಾಗೇಶ್ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಯಡಿಯೂರಪ್ಪ ವಿರುದ್ಧದ ದೂರನ್ನೂ ರದ್ದು ಮಾಡಬೇಕು ಎಂದು ಕೋರಿದ್ದರು. ಇದನ್ನು ಮಾನ್ಯ ಮಾಡಿದ ಕೋರ್ಟ್, 4 ಪ್ರಕರಣಗಳಲ್ಲಿ ಜಾಮೀನು ಪಡೆಯುವಾಗ ಅವರು ಸಲ್ಲಿಸಿದ್ದ ಬಾಂಡ್ ರದ್ದುಪಡಿಸಿದ್ದು, ವಶಪಡಿಸಿಕೊಂಡಿದ್ದ ಪಾಸ್ಪೋರ್ಟ್ ಮರಳಿಸುವಂತೆ ಆದೇಶ ನೀಡಿದೆ.
ರಾಜ್ಯ ಘಟಕದಲ್ಲಿ ಹೊಸ ಚೈತನ್ಯ : ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿರುವುದರಿಂದ ಕರ್ನಾಟಕ ಬಿಜೆಪಿಗೆ ಹೊಸ ಚೈತನ್ಯ ಬಂದಿದೆ. ರಾಜ್ಯದಲ್ಲಿ ಇಂದಿಗೂ ಯಡಿಯೂರಪ್ಪ ಅವರು ಪಕ್ಷದ ಪ್ರಬಲ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. [ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಲು ಇಲ್ಲಿ ಸಹಿ ಹಾಕಿ]
ತಮ್ಮ ಮೇಲಿನ ಆರೋಪಗಳ ಕಾರಣದಿಂದಾಗಿ ಸಕ್ರಿಯ ರಾಜಕಾರಣದಿಂದ ಯಡಿಯೂರಪ್ಪ ಅವರು ಸ್ಪಲ್ಪ ದೂರವಾಗಿದ್ದರು. ಈಗ ಪ್ರಕರಣಗಳು ರದ್ದಾಗಿರುವುದರಿಂದ ಅವರು ಸಕ್ರಿಯ ರಾಜಕಾರಣಕ್ಕೆ ಮರಳಲಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications