ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದಾನಂದ ಗೌಡರಿಗೆ ಷರತ್ತು ವಿಧಿಸಿದ ಬಿ.ಎಸ್.ಯಡಿಯೂರಪ್ಪ!

|
Google Oneindia Kannada News

ನವದೆಹಲಿ, ಮೇ 30 : ಕರ್ನಾಟಕದಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರು ಕೇಂದ್ರ ಸಚಿವರಾಗಲಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಗುರುವಾರ ಸಂಜೆ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಸದಾನಂದ ಗೌಡರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಸೂಚನೆ ನೀಡಿದ್ದಾರೆ. ಡಿ.ವಿ.ಸದಾನಂದ ಗೌಡರು ದೆಹಲಿಯಲ್ಲಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.

ಕರ್ನಾಟಕದಿಂದ ಮೋದಿ ಸಂಪುಟ ಸೇರುವ ಸಂಸದರ ಪಟ್ಟಿ ಅಂತಿಮಕರ್ನಾಟಕದಿಂದ ಮೋದಿ ಸಂಪುಟ ಸೇರುವ ಸಂಸದರ ಪಟ್ಟಿ ಅಂತಿಮ

ಆಶೀರ್ವಾದ ಮಾಡುವ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸದಾನಂದ ಗೌಡರಿಗೆ ಷರತ್ತನ್ನು ಹಾಕಿದ್ದಾರೆ. ಯಡಿಯೂರಪ್ಪ ಷರತ್ತಿಗೆ ಒಪ್ಪಿಗೆ ನೀಡಿರುವ ಸದಾನಂದ ಗೌಡರು ನಿಮ್ಮ ಷರತ್ತಿನಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರುಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಒಕ್ಕಲಿಗ ಕೋಟಾದಡಿ ಡಿ.ವಿ.ಸದಾನಂದ ಗೌಡ ಅವರು ನರೇಂದ್ರ ಮೋದಿ ಸಂಪುಟ ಸೇರುತ್ತಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದೆ. ರಾಜ್ಯದ ನಾಲ್ವರು ಸಂಸದರು ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರುತ್ತಿದ್ದಾರೆ.......

ಲೋಕಸಭಾ ಚುನಾವಣೆ : ಕರ್ನಾಟಕದಿಂದ ಮೊದಲ ಬಾರಿ ಗೆದ್ದ 10 ಸಂಸದರುಲೋಕಸಭಾ ಚುನಾವಣೆ : ಕರ್ನಾಟಕದಿಂದ ಮೊದಲ ಬಾರಿ ಗೆದ್ದ 10 ಸಂಸದರು

ಯಡಿಯೂರಪ್ಪ ಹಾಕಿದ ಷರತ್ತು

ಯಡಿಯೂರಪ್ಪ ಹಾಕಿದ ಷರತ್ತು

ಸಚಿವರಾಗಿ ನಿಯೋಜಿತರಾಗಿರುವ ಡಿ.ವಿ.ಸದಾನಂದ ಗೌಡರು ದೆಹಲಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಆಪ್ತ ಮಿತ್ರನನ್ನು ನೆನಪಿಸಿಕೊಂಡ ಯಡಿಯೂರಪ್ಪ ಅವರು, 'ಅನಂತ್ ಕುಮಾರ್‌ರಂತೆ ನೀವು ಕೆಲಸ ಮಾಡಬೇಕು' ಎಂದು ಷರತ್ತು ಹಾಕಿದರು.

ಕರ್ನಾಟಕದ ಜನರ ಧ್ವನಿಯಾಗಬೇಕು

ಕರ್ನಾಟಕದ ಜನರ ಧ್ವನಿಯಾಗಬೇಕು

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾಗಿದ್ದ ಅನಂತ್ ಕುಮಾರ್ ಅವರ ಸ್ಥಾನವನ್ನು ನೀವು ತುಂಬಬೇಕು. ರಾಜ್ಯದ ಜನರ ಕೆಲಸಗಳಿಗೆ ದೆಹಲಿಯಲ್ಲಿ ನೀವು ಸ್ಪಂದಿಸಬೇಕು ಎಂದು ಯಡಿಯೂರಪ್ಪ ಅವರು ಷರತ್ತು ಹಾಕಿದ್ದು, ಇದಕ್ಕೆ ಸದಾನಂದ ಗೌಡರು ಒಪ್ಪಿಗೆ ನೀಡಿದ್ದಾರೆ.

ರಾಜ್ಯದ ಪರ ಧ್ವನಿಯಾಗಿದ್ದ ಅನಂತ್

ರಾಜ್ಯದ ಪರ ಧ್ವನಿಯಾಗಿದ್ದ ಅನಂತ್

ಅನಂತ್ ಕುಮಾರ್ ಅವರು ರಾಷ್ಟ್ರ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ದೆಹಲಿಯಲ್ಲಿರುವ ಬಿಜೆಪಿ ನಾಯಕರ ಜೊತೆಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಕರ್ನಾಟಕ ಮತ್ತು ದೆಹಲಿ ನಡುವಿನ ಕೊಂಡಿಯಾಗಿ ಅವರು ಕೆಲಸ ಮಾಡುತ್ತಿದ್ದರು. ಅವರ ಅಕಾಲಿಕ ಮರಣ ರಾಜ್ಯ ಬಿಜೆಪಿಗೆ ದೊಡ್ಡ ನಷ್ಟವನ್ನೇ ಉಂಟು ಮಾಡಿದೆ.

ಗೆಳೆಯನ ನೆನಪು ಮಾಡಿಕೊಂಡ ಯಡಿಯೂರಪ್ಪ

ಗೆಳೆಯನ ನೆನಪು ಮಾಡಿಕೊಂಡ ಯಡಿಯೂರಪ್ಪ

ಯಡಿಯೂರಪ್ಪ ಮತ್ತು ಅನಂತ್ ಕುಮಾರ್ ಉತ್ತಮ ಗೆಳೆಯರು. ಇಬ್ಬರೂ ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಲು ಹಗಲಿರುಳು ಶ್ರಮಿಸಿದವರು. ಯಡಿಯೂರಪ್ಪ ರಾಜ್ಯ ರಾಜಕಾರಣದಲ್ಲಿ, ಅನಂತ್ ಕುಮಾರ್ ರಾಷ್ಟ್ರೀಯ ರಾಜಕೀಯದಲ್ಲಿ ತೊಡಗಿದ್ದರು. ಯಡಿಯೂರಪ್ಪ ಅವರಿಗೆ ಮಿತ್ರನ ಅಗಲಿಕೆಯ ನೋವು ಸದಾ ಕಾಡುತ್ತಿದೆ.

ಕರ್ನಾಟಕದಿಂದ ನಾಲ್ವರು ಸಂಪುಟಕ್ಕೆ

ಕರ್ನಾಟಕದಿಂದ ನಾಲ್ವರು ಸಂಪುಟಕ್ಕೆ

ಕರ್ನಾಟಕದಿಂದ ನಾಲ್ವರು ಸಂಸದರು ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

* ಡಿ.ವಿ.ಸದಾನಂದ ಗೌಡ (ಬೆಂಗಳೂರು ಉತ್ತರ)

* ಪ್ರಹ್ಲಾದ್ ಜೋಶಿ (ಧಾರವಾಡ)

* ಸುರೇಶ್ ಅಂಗಡಿ (ಬೆಳಗಾವಿ)

* ನಿರ್ಮಲಾ ಸೀತಾರಾಮನ್ (ರಾಜ್ಯಸಭಾ ಸದಸ್ಯರು)

ಯಡಿಯೂರಪ್ಪ ಭೇಟಿ

ಡಿ.ವಿ.ಸದಾನಂದ ಗೌಡರು ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ ಬಗ್ಗೆ ಟ್ವೀಟ್ ಮಾಡಿದ್ದಾರೆ.

English summary
Karnataka BJP president B.S. Yeddyurappa condition for D.V.Sadananda Gowda. Sadananda Gowda will take oath as minister in Prime Minister Narendra Modi cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X