ಗ್ರಾಮ ವಾಸ್ತವ್ಯದ ಮೂಲಕ ಹೊಸ ನಾಟಕ : ಯಡಿಯೂರಪ್ಪ
ಬೆಂಗಳೂರು, ಜೂನ್ 03 : 'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮೂಲಕ ಹೊಸ ನಾಟಕವನ್ನು ಆರಂಭಿಸಿದ್ದಾರೆ' ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವ್ಯಂಗ್ಯವಾಡಿದರು.
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, 'ಕುಮಾರಸ್ವಾಮಿ ಒಂದು ವರ್ಷದಿಂದ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಾಸ್ತವ್ಯ ಮಾಡಿದ್ದರು. ಅಲ್ಲಿ ಜನಸಾಮಾನ್ಯರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಬಗ್ಗೆ ಟೀಕೆ ಮಾಡಿದರೂ ತಲೆ ಕೆಡಿಸಿಕೊಂಡಿರಲಿಲ್ಲ' ಎಂದರು.
ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಸ್ಥಳ, ದಿನಾಂಕ ಅಂತಿಮ
'ಒಂದು ವರ್ಷದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಲಿ. ಯಾವುದೇ ಅಧಿಕಾರಿಯಾಗಲಿ ಹಾಗೂ ಸಚಿವರು, ಶಾಸಕರಾಗಲಿ ಬರ ಪೀಡಿತ ಪ್ರದೇಶಗಳ ಕಡೆ ತಲೆ ಹಾಕಿರಲಿಲ್ಲ' ಎಂದು ಆರೋಪಿಸಿದರು.
ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ ಎಚ್.ಡಿ.ಕುಮಾರಸ್ವಾಮಿ
'ಮುಖ್ಯಮಂತ್ರಿಗಳು ಮೊದಲು ಬರ ಪೀಡಿತ ಪ್ರದೇಶಗಳಿಗೆ ಪ್ರವಾಸ ಮಾಡಲಿ. ಜನರ ಸಂಕಷ್ಟಕ್ಕೆ ನೆರವಾಗಲಿ. ಜೂನ್ 5ರ ನಂತರ ನಾವೂ ಕೂಡಾ ಬರಪೀಡಿತ ಪ್ರದೇಶಗಳಿಗೆ ಪ್ರವಾಸ ಮಾಡುತ್ತೇವೆ' ಎಂದು ಯಡಿಯೂರಪ್ಪ ಹೇಳಿದರು.
ನನ್ನ ಗ್ರಾಮ ವಾಸ್ತವ್ಯ ಯೋಜನೆಯನ್ನು ಜೂನ್ 21ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲ್ಲೂಕಿನಲ್ಲಿ,22ರಂದು ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಪುನರಾರಂಭಿಸುತ್ತಿದ್ದೇನೆ.ಮುಂದಿನ ತಿಂಗಳ ಗ್ರಾಮವಾಸ್ತವ್ಯ ಜುಲೈ5 ಹಾಗೂ 6ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿದ್ದೇನೆ
— H D Kumaraswamy (@hd_kumaraswamy) June 3, 2019
ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ
ಅವರ
ಗ್ರಾಮ
ವಾಸ್ತವ್ಯದ
ದಿನಾಂಕ,
ಸ್ಥಳ
ಅಂತಿಮಗೊಂಡಿದೆ.
ಕುಮಾರಸ್ವಾಮಿ
ಅವರು
ಯಾದಗಿರಿ
ಜಿಲ್ಲೆಯ
ಗುರುಮಿಟ್ಕಲ್
ತಾಲೂಕಿನಲ್ಲಿ
ಜೂನ್
21ರಂದು
ಹಾಗೂ
ಜೂನ್
22
ರಂದು
ಕಲಬುರಗಿ
ಜಿಲ್ಲೆಯ
ಅಫಜಲಪುರ
ತಾಲೂಕಿನಲ್ಲಿ
ಗ್ರಾಮ
ವಾಸ್ತವ್ಯ
ನಡೆಸಲಿದ್ದಾರೆ.
ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ
ಜುಲೈ 5 ಹಾಗೂ 6 ರಂದು ಬೀದರ್ ಜಿಲ್ಲೆ ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕುಗಳಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.