ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ

|
Google Oneindia Kannada News

Recommended Video

ಸಿಎಂ ಆಗುತ್ತಿದ್ದಂತೆ ಉಡುಗೊರೆ ಕೊಟ್ಟ ಯಡಿಯೂರಪ್ಪ

ಬೆಂಗಳೂರು, ಜುಲೈ 26: ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡು ಒಂದು ಗಂಟೆ ಒಂಗೆ ರಾಜ್ಯದ ರೈತರಿಗೆ ಮತ್ತು ನೇಕಾರರಿಗೆ ಭಾರಿ ದೊಡ್ಡ ಉಡುಗೊರೆಯನ್ನು ಸಿಎಂ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಕಾರ್ಯದರ್ಶಿ ಅವರೊಂದಿಗೆ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ ಅವರು ನೇಕಾರರ ಪೂರ್ಣ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದರು.

LIVE: ನೇಕಾರರಿಗೆ, ರೈತರಿಗೆ ಭರ್ಜರಿ ಗಿಫ್ಟ್‌ ಕೊಟ್ಟ ಸಿಎಂ ಯಡಿಯೂರಪ್ಪLIVE: ನೇಕಾರರಿಗೆ, ರೈತರಿಗೆ ಭರ್ಜರಿ ಗಿಫ್ಟ್‌ ಕೊಟ್ಟ ಸಿಎಂ ಯಡಿಯೂರಪ್ಪ

ರೈತರಿಗೂ ಉಡುಗೊರೆ ಘೋಷಿಸಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ಕೊಡುತ್ತಿರುವ ಆರು ಸಾವಿರ ರೂಪಾಯಿಯ ಜೊತೆಗೆ ರಾಜ್ಯ ಸರ್ಕಾರವು ನಾಲ್ಕು ಸಾವಿರ ಹಣವನ್ನು ಹೆಚ್ಚುವರಿಯಾಗಿ ಕೊಡುವುದಾಗಿ ಘೋಷಿಸಿದರು.

Yeddyurappa Gives Gift to Farmers and Weaver as Soon He Become Chief Minister

ಕೇಂದ್ರ ಸರ್ಕಾರವು ರೈತರಿಗೆ ಎರಡು ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ಕೊಡುತ್ತಿದ್ದು, ರಾಜ್ಯ ಸರ್ಕಾರವು ಎರಡು ಸಾವಿರದಂತೆ ಎರಡು ಕಂತುಗಳನ್ನು ನೀಡುವುದಾಗಿ ಘೋಷಿಸಿದರು. ಅಲ್ಲಿಗೆ ಒಟ್ಟಿಗೆ ವರ್ಷಕ್ಕೆ ಹತ್ತು ಸಾವಿರ ರೂಪಾಯಿ ರಾಜ್ಯದ ರೈತರಿಗೆ ಸಿಗಲಿದೆ.

ನೇಕಾರರ ಸಾಲವು ನೂರು ಕೋಟಿ ರೂಪಾಯಿಗಿಂತಲೂ ಹೆಚ್ಚಿಗೆ ಇದ್ದು, ಎಲ್ಲ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಯಡಿಯೂರಪ್ಪ ಅವರು ಹೇಳಿದರು.

ಕುಮಾರಸ್ವಾಮಿ ಅವರು ಘೋಷಿಸಿದ್ದ ರೈತರ ಸಾಲಮನ್ನಾ ಕುರಿತಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಿರ್ಣಯ ಪ್ರಕಟಿಸುವದಾಗಿ ಹೇಳಿದರು.

English summary
Chief Minister Yeddyurappa waive off loan of Karnataka's weavers and he announces that state government will give four thousand to farmers every year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X