ಅಂತ್ಯಕಾಣದ ಸಂಪುಟ ವಿಸ್ತರಣೆ ಸಂಕಟ: ಪಟ್ಟಿ ಬಿಡುಗಡೆ ಮುಂದೂಡಿಕೆ
ಬೆಂಗಳೂರು, ಆಗಸ್ಟ್ 19: ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಯಾವಾಗ ಎನ್ನುವ ಪ್ರಶ್ನೆಗೆ ಅಂತೂ ಉತ್ತರ ಸಿಕ್ಕಿ ದಿನ ನಿಗದಿಯಾದರೂ ಸಂಪುಟಕ್ಕೆ ಸೇರಲಿರುವ ಶಾಸಕರ ಪಟ್ಟಿ ಮಾತ್ರ ಬಿಡುಗಡೆಯಾಗಿಲ್ಲ.
ಹಲವು ದಿನಗಳಿಂದ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿಲ್ಲ ಎನ್ನುವುದು ಎಲ್ಲರ ಆರೋಪವಾಗಿತ್ತು. ಇದೀಗ ದಿನಾಂಕವೂ ನಿಗದಿಯಾಗಿದೆ. ಇನ್ನೇನು 10-12 ತಾಸುಗಳೊಳಗಾಗಿ ಸಂಪುಟ ವಿಸ್ತರಣೆಯಾಗಲಿದೆ. ಆದರೆ ಹಿಂದಿನ ದಿನ ರಾತ್ರಿವರೆಗೂ ಸಚಿವರ ಪಟ್ಟಿ ಬಿಡುಗಡೆಯಾಗಿಲ್ಲ.
ಅರುಣ್ ಜೇಟ್ಲಿಯವರ ಆರೋಗ್ಯದ ಕುರಿತು ಏಮ್ಸ್ ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಬಳಿಕ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದು ನಂತರವಷ್ಟೇ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಇದುವರೆಗೂ ಸಚಿವರ ಪಟ್ಟಿ ಹೊರಬಿದ್ದಿಲ್ಲ.

ಈಗಾಗಲೇ ರಾಜಭವನದ ಬಳಿ ತೀವ್ರ ಭದ್ರತೆ ಕಲ್ಪಿಸಲಾಗಿದೆ. 8 ಡಿಸಿಪಿ ನೇತೃತ್ವದಲ್ಲಿ 800ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ವಿಧಾನಸೌಧ ಹಾಗೂ ರಾಜಭವನದ ಎದುರು ಭದ್ರತೆ ಕಲ್ಪಿಸಲಾಗಿದೆ.
ಸರ್ಕಾರ ರಚನೆ ಮಾಡಿ ತಿಂಗಳಾಗುತ್ತಾ ಬಂದರೂ ಮಂತ್ರಿ ಮಂಡಲ ರಚನೆಯಾಗದ್ದಕ್ಕೆ ವಿಪಕ್ಷಗಳಿಂದ ಬಿಜೆಪಿ ತೀವ್ರ ಟೀಕೆಗಳನ್ನು ಎದುರಿಸುತ್ತಿದೆ. ಬಿಜೆಪಿ ಅವರದ್ದು ಏಕವ್ಯಕ್ತಿ , ಏಕಚಕ್ರಾಧಿಪತ್ಯದ ಸರ್ಕಾರ ಎಂದೆಲ್ಲಾ ಗೇಲಿ ಕೇಳಿಬರುತ್ತಿದೆ.
ಸಂಭಾವ್ಯ ಸಚಿವರ ಪಟ್ಟಿ ಇಂತಿದೆ:
- ಬಿ. ಶ್ರೀರಾಮುಲು, ವಾಲ್ಮೀಕಿ
-ಆರ್. ಅಶೋಕ್, ಒಕ್ಕಲಿಗ
-ಕೆ.ಎಸ್. ಈಶ್ವರಪ್ಪ, ಕುರುಬ
- ಗೋವಿಂದ ಕಾರಜೋಳ, ದಲಿತ
-ಜಗದೀಶ್ ಶೆಟ್ಟರ್, ಲಿಂಗಾಯತ
- ಸುರೇಶ್ ಕುಮಾರ್, ಬ್ರಾಹ್ಮಣ
- ಡಾ. ಅಶ್ವತ್ಥ ನಾರಾಯಣ, ಒಕ್ಕಲಿಗ
- ಮಾಧುಸ್ವಾಮಿ, ಲಿಂಗಾಯತ
- ಕೋಟ ಶ್ರೀನಿವಾಸ ಪೂಜಾರಿ, ಬಿಲ್ಲವ
- ವಿ. ಸೋಮಣ್ಣ, ಲಿಂಗಾಯತ
- ಬಾಲಚಂದ್ರ ಜಾರಕಿಹೊಳಿ, ವಾಲ್ಮೀಕಿ
- ಬಸವರಾಜು ಬೊಮ್ಮಾಯಿ, ಲಿಂಗಾಯತ
- ಎಸ್. ಅಂಗಾರ, ದಲಿತ
- ಶಶಿಕಲಾ ಜೊಲ್ಲೆ(ಮಹಿಳೆ), ಲಿಂಗಾಯತ
- ಅಪ್ಪಚ್ಚು ರಂಜನ್, ಕೊಡವ
- ನಾಗೇಶ್(ಪಕ್ಷೇತರ), ದಲಿತ
- ರಾಜುಗೌಡ, ವಾಲ್ಮೀಕಿ
- ಸಿ.ಟಿ. ರವಿ/ಅರವಿಂದ್ ಲಿಂಬಾವಳಿ, ಒಕ್ಕಲಿಗ/ದಲಿತ
- ಚಂದ್ರಪ್ಪ, ದಲಿತ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications