'ಡಿಸಿಎಂ ಹುದ್ದೆಯ ಬದಲಿಗೆ ಜಲಸಂಪನ್ಮೂಲ ಖಾತೆ'
ಬೆಂಗಳೂರು, ಫೆ. 10: ಬಯಸಿದಂತೆಯೆ ಜಲಸಂಪನ್ಮೂಲ ಖಾತೆಯನ್ನು ಸಚಿವ ರಮೇಶ್ ಜಾರಕಿಹೊಳಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಖಾತೆ ಹಂಚಿಕೆ ಮಾಡಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿರುವ ಪಟ್ಟಿ 'ಒನ್ ಇಂಡಿಯಾ'ಕ್ಕೆ ಲಭ್ಯವಾಗಿದ್ದು, ಸಂಜೆ ಹೊತ್ತಿಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರ ಅಂಕಿತದೊಂದಿಗೆ ಅಧಿಕೃತವಾಗಿ ಪ್ರಕಟಗೊಳ್ಳಲಿದೆ.
ಜಲಸಂಪನ್ಮೂಲ ಖಾತೆಗೆ ಪಟ್ಟು ಹಿಡಿದಿದ್ದ ಸಚಿವ ರಮೇಶ್ ಜಾರಕಿಹೊಳಿ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಡಿಸಿಎಂ ಹುದ್ದೆಯ ಬದಲಿಗೆ ಜಲಸಂಪನ್ಮೂಲ ಖಾತೆ ಕೊಡುವ ಮೂಲಕ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಿಎಂ ಸಮಾಧಾನ ಮಾಡಿದ್ದಾರೆ. ಜೊತೆಗೆ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಎಂಎಸ್ಐಎಲ್ ಅಧ್ಯಕ್ಷ ಸ್ಥಾನ ಕೊಡಲಾಗಿದ್ದು, ಸಂಜೆ ವೇಳೆಗೆ ಸಿಎಂ ಅಧಿಕೃತ ಮುದ್ರೆ ಒತ್ತಲಿದ್ದಾರೆ.
ಇನ್ನು ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಸಿಎಂ ಯಡಿಯೂರಪ್ಪ ಮತ್ತೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಡಿಸಿಎಂ ಲಕ್ಷ್ಣಣ ಸವದಿ ಅವರ ಬಳಿಯಿದ್ದ ಕೃಷಿ ಖಾತೆಯನ್ನು ಬಸವರಾಜ್ ಬೊಮ್ಮಾಯಿ ಅವರಿಗೆ ಗೃಹ ಖಾತೆ ಜೊತೆಗೆ ಹೆಚ್ಚುವರಿಯಾಗಿ ಕೊಡಲಾಗಿದೆ. ಡಿಸಿಎಂ ಲಕ್ಷ್ಮಣ ಸವದಿ ಅವರಲ್ಲಿ ಸಾರಿಗೆ ಖಾತೆ ಮಾತ್ರ ಉಳಿಸಲಾಗಿದೆ.

ಉಳಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಾತೆಗಳನ್ನು ಹಂಚಿಕೆ ಮಾಡಿರುವ ವಿವರ ಹೀಗಿದೆ:
ಎಸ್ ಟಿ ಸೋಮಶೇಖರ್- ಸಹಕಾರ ಇಲಾಖೆ ಖಾತೆ
ಬಿ.ಸಿ. ಪಾಟೀಲ್ - ಅರಣ್ಯ ಖಾತೆ
ಡಾ. ಸುಧಾಕರ್ - ವೈದ್ಯಕೀಯ ಶಿಕ್ಷಣ
ನಾರಾಯಣಗೌಡ - ಪೌರಾಡಳಿತ ಹಾಗೂ ತೋಟಗಾರಿಕೆ
ಶಿವರಾಂ ಹೆಬ್ಬಾರ್ - ಕಾರ್ಮಿಕ ಖಾತೆ
ಆನಂದ ಸಿಂಗ್ - ಆಹಾರ ಮತ್ತು ನಾಗರಿಕ ಪೂರೈಕೆ
ಬೈರತಿ ಬಸವರಾಜು - ನಗರಾಭಿವೃದ್ಧಿ ಇಲಾಖೆ ಖಾತೆ
ಕೆ. ಗೋಪಾಲಯ್ಯ-ಸಣ್ಣ ಕೈಗಾರಿಕೆ
ಶ್ರೀಮಂತ ಪಾಟೀಲ್ - ಜವಳಿ ಖಾತೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಂಚಿಕೆ ಮಾಡಿದ್ದಾರೆ. ರಾಜ್ಯಪಾಲರ ಅಂಕಿತ ಹಾಕುವುದು ಮಾತ್ರ ಬಾಕಿಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications