ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ಸೇರಿದ ಯಡಿಯೂರಪ್ಪ ಆಪ್ತ ಹೇಳಿದ್ದೇನು?

|
Google Oneindia Kannada News

Recommended Video

ಬಿ ಎಸ್ ಯಡಿಯೂರಪ್ಪ ಆಪ್ತ ಜೆಡಿಎಸ್ ಗೆ ಸೇರ್ಪಡೆ | Oneindia Kannada

ಬೆಂಗಳೂರು, ಜನವರಿ 24 : ಒಂದು ಕಾಲದಲ್ಲಿ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಆರ್.ಎಂ.ಮಂಜುನಾಥ ಗೌಡರು ಜೆಡಿಎಸ್ ಸೇರಿದ್ದಾರೆ. 2018ರ ಚುನಾವಣೆಯಲ್ಲಿ ಅವರು ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಜೆಡಿಎಸ್ ಸೇರಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಂಜುನಾಥ ಗೌಡರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಶಿವಮೊಗ್ಗ ರಾಜಕೀಯ : ಜೆಡಿಎಸ್‌ ಸೇರಿದ ಆರ್.ಎಂ.ಮಂಜುನಾಥ ಗೌಡಶಿವಮೊಗ್ಗ ರಾಜಕೀಯ : ಜೆಡಿಎಸ್‌ ಸೇರಿದ ಆರ್.ಎಂ.ಮಂಜುನಾಥ ಗೌಡ

ಮಂಜುನಾಥ ಗೌಡರು ಜೆಡಿಎಸ್ ಸೇರುತ್ತಿದ್ದಂತೆ ತೀರ್ಥಹಳ್ಳಿಯಲ್ಲಿಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 1,793 ಮತಗಳ ಅಂತರದಿಂದ ಸೋತಿದ್ದ ಮಂಜುನಾಥ ಗೌಡರು, ಜೆಡಿಎಸ್ ಸೇರಿರುವುದು ಕ್ಷೇತ್ರದ ರಾಜಕೀಯ ಚಿತ್ರವಣನ್ನು ಬದಲಾಯಿಸಿದೆ.

ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?ಕ್ಷೇತ್ರ ಪರಿಚಯ : ತುಂಗಾ ತೀರದ ತೀರ್ಥಹಳ್ಳಿಯಲ್ಲಿ ಗೆಲುವು ಯಾರಿಗೆ?

'ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಕಟ್ಟಲು ಬದ್ಧವಾಗಿರುತ್ತೇನೆ ಎಂದು ದೇವೇಗೌಡರಿಗೆ ವಾಗ್ದಾನ ನೀಡಿದ್ದೇನೆ' ಎಂದು ಮಂಜುನಾಥ ಗೌಡರು ಹೇಳಿದ್ದಾರೆ. ತೀರ್ಥಹಳ್ಳಿಯ ಮತ್ತಷ್ಟ ನಾಯಕರು ಶೀಘ್ರದಲ್ಲಿಯೇ ಜೆಡಿಎಸ್ ಸೇರುವ ಸಾಧ್ಯತೆ ಇದೆ. 'ವಿವಿಧ ಪಕ್ಷಗಳ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ' ಎಂದು ಮಂಜುನಾಥ ಗೌಡರು ಕೆಲವು ದಿನಗಳ ಹಿಂದೆ ಹೇಳಿದ್ದರು.

ಶಿವಮೊಗ್ಗ ರಾಜಕೀಯ : ಆರ್.ಎಂ.ಮಂಜುನಾಥ ಗೌಡ ಜೆಡಿಎಸ್‌ ಅಭ್ಯರ್ಥಿಶಿವಮೊಗ್ಗ ರಾಜಕೀಯ : ಆರ್.ಎಂ.ಮಂಜುನಾಥ ಗೌಡ ಜೆಡಿಎಸ್‌ ಅಭ್ಯರ್ಥಿ

ವಾಪಸ್ ಬಂದಿದ್ದು ಸಂತಸ ತಂದಿದೆ

ವಾಪಸ್ ಬಂದಿದ್ದು ಸಂತಸ ತಂದಿದೆ

'ಮಾತೃ ಪಕ್ಷಕ್ಕೆ ವಾಪಸ್ ಆಗುತ್ತಿರುವುದು ಸಂತಸ ತಂದಿದೆ. 1986-96ರ ತನಕ ನಾನು ಜೆಡಿಎಸ್ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ' ಎಂದು ಆರ್.ಎಂ.ಮಂಜುನಾಥ ಗೌಡರು ಹೇಳಿದರು.

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ

'ಜನವರಿ 9ರಂದು ತೀರ್ಥಹಳ್ಳಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಸಿದ್ದೆ. ಆಗ ಎಲ್ಲರೂ ಜೆಡಿಎಸ್ ಸೇರಿ ಎಂದು ಸಲಹೆ ನೀಡಿದ್ದರು. ಅವರ ತೀರ್ಮಾನದಂತೆ ಪಕ್ಷ ಸೇರಿದ್ದೇನೆ' ಎಂದು ಮಂಜುನಾಥ ಗೌಡರು ಹೇಳಿದ್ದಾರೆ.

ಬೃಹತ್ ಸಮಾವೇಶ ಆಯೋಜನೆ

ಬೃಹತ್ ಸಮಾವೇಶ ಆಯೋಜನೆ

'ಮುಂದಿನ ದಿನಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದೇನೆ. ಶಿವಮೊಗ್ಗದಲ್ಲಿ ಪಕ್ಷ ಕಟ್ಟಲು ಬದ್ಧವಾಗಿದ್ದೇನೆ' ಎಂದರು.

ಕೆಜೆಪಿ ಅಭ್ಯರ್ಥಿಯಾಗಿದ್ದರು

ಕೆಜೆಪಿ ಅಭ್ಯರ್ಥಿಯಾಗಿದ್ದರು

ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಆರ್.ಎಂ.ಮಂಜುನಾಥ ಗೌಡರು ಕಳೆದ ಚುನಾವಣೆಯಲ್ಲಿ ತೀರ್ಥಹಳ್ಳಿಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.35, 817 ಮತಗಳನ್ನು ಪಡೆದು 2ನೇ ಸ್ಥಾನಗಳಿಸಿದ್ದರು.

English summary
Karnataka BJP president B.S.Yeddyurappa's close aide, Shivamogga DCC bank president R.M.Manjunath Gowda joined JDS on January 23, 2018. He will contest for Karnataka assembly elections 2018 form Thirthahalli assembly constituency, Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X