ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಬಾರಿ ಹಾನಿ ಪ್ರಮಾಣ ಹೆಚ್ಚಾಗಿದೆ: ಮುಖ್ಯಮಂತ್ರಿ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಅ. 22: ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಮೂರು ತಿಂಗಳುಗಳ ಅವಧಿಯಲ್ಲಿ ಎರಡನೇ ಬಾರಿ ಪ್ರವಾಹ ಸ್ಥಿತಿ ಎದುರಾಗಿದೆ. ಹೀಗಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿನ್ನೆ (ಅ.21) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿ ಬಂದಿದ್ದಾರೆ. ಕಲಬುರಗಿ, ಬೆಳಗಾವಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಸಿಎಂ ಯಡಿಯೂರಪ್ಪ ಅವರು ಮಾಡಿದ್ದು, ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ವಿಧಾನಸೌಧದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಆ ಭಾಗದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಹಾನಿಯ ಪ್ರಮಾಣ ಹೆಚ್ಚಾಗಿದೆ. ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣದ ಪರಿಹಾರವಾಗಿ 10 ಸಾವಿರ ರೂ. ವಿತರಣೆ ಮಾಡಿದ್ದೇವೆ.

Yeddyurappa said this time of floods in North Karnataka has more damage than ever before

ಕಲಬುರಗಿ, ಯಾದಗಿರಿ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿಎಂ ತೃಪ್ತಿಕಲಬುರಗಿ, ಯಾದಗಿರಿ ಜಿಲ್ಲೆಗಳ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿಎಂ ತೃಪ್ತಿ

ಹಾನಿಯ ಅಂದಾಜಿನ ಬಗ್ಗೆ ಇಂದು ಸಚಿವ ಸಂಪುಟದಲ್ಲಿ ಚರ್ಚಿಸಿ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್ ಡಿ ಆರ್ ಎಫ್ ನಿಯಮಾವಳಿ ತಿದ್ದುಪಡಿ ಮಾಡುವ ಬಗ್ಗೆಯೂ ಇಂದು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

Recommended Video

Mohammed Siraj ಬೆಳೆದು ಬಂದ ಹಾದಿ , ಹಾಗು IPLಗೆ ಪ್ರವೇಶ ಹೇಗಿತ್ತು | Oneindia Kannada

English summary
CM Yediyurappa has conducted an aerial survey in Kalaburagi, Belgaum, Raichur and Vijayapura districts, and given a statement in Vidhana soudha. We surveyed the damage in that area. This time the damage rate is higher than last time Yediyurappa said. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X