ಕೇಂದ್ರ ನಾಯಕರಿಗೆ ಬಿಎಸ್ವೈ ರವಾನಿಸಿದ ಎಚ್ಚರಿಕೆ ಏನು?
ಬೆಂಗಳೂರು, ಆಗಸ್ಟ್, 18: ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರ್ ಎಸ್ ಎಸ್ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಕರ್ನಾಟಕದ ಪ್ರಭಾವಿ ಲಿಂಗಾಯಿತ ನಾಯಕ ಭಿನ್ನಮತ ಹೊರಹಾಕುತ್ತಿರುವವರ ವಿರುದ್ಧ ಆರ್ ಎಸ್ ಎಸ್ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ ಎಂದು ಮೂಲಗಳು ಒನ್ ಇಂಡಿಯಾಕ್ಕೆ ತಿಳಿಸಿದೆ.[ಸೆ.26ರಂದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ]
ಭಿನ್ನಮತದಿಂದ ಬೇಸತ್ತಿರುವ ಬಿಎಸ್ ವೈ, ಮುಂದಿನ ಚುನಾವಣೆಗೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನನ್ನನ್ನು ಈಗಲೇ ಘೊಷಣೆ ಮಾಡಬೇಕು. ಇಲ್ಲವಾದರೆ ಹಿಂದಿನ ಸಾರಿ ಪಕ್ಷ ಬಿಟ್ಟುಹೋದಂತಹದ್ದೇ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಆರ್ ಎಸ್ ಎಸ್ ನಾಯಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.

2013ರ ವಿಧಾನಸಭೆ ಚುನಾವಣೆ
2013ರ ವಿಧಾನಸಭೆ ಚುನಾವಣೆ ವೇಳೆ ಕೆಲ ಕಾರಣಗಳಿಂದ ಬಿಎಸ್ ವೈ ಬಿಜೆಪಿಯನ್ನು ತೊರೆದು ಕೆಜೆಪಿ ಸ್ಥಾಪನೆ ಮಾಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿ 40 ಸ್ಥಾನ ಗಳಿಸಲಷ್ಟೇ ಶಕ್ತವಾಗಿತ್ತು.

ಕೋರ್ ಕಮಿಟಿ
ಬಿಜೆಪಿ ಕೋರ್ ಕಮೀಟಿಯಿಂದ ತಮ್ಮ ಬೆಂಬಲಿಗರನ್ನು ಕೈ ಬಿಟ್ಟಿದ್ದಕ್ಕೆ ಬಿ ಎಸ್ ವೈ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿ ಎಲ್ ಸಂತೋಷ ಕೆಲವೊಂದು ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು ಎಂದು ಬಿಎಸ್ ವೈ ಹೇಳಿಕೊಂಡಿದ್ದಾರೆ.

75 ಕ್ಕೆ ನಿವೃತ್ತಿ
ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ 75 ವರ್ಷ ತುಂಬಿದ ಕಾರಣಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಘಟನೆ ಬಿಜೆಪಿಯಲ್ಲಿ ನಡೆದಿದೆ.

2018ಕ್ಕೆ ಬಿ ಎಸ್ ವೈಗೆ 75
2018 ರಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಬಿ ಎಸ್ ಯಡಿಯೂರಪ್ಪ ಅವರಿಗೂ 75 ವರ್ಷ ತುಂಬಲಿದೆ. ಪಕ್ಷ ಈ ನಿವೃತ್ತಿ ನೆಲೆಯಲ್ಲೂ ಯೋಚನೆ ಮಾಡಬಹುದು.

ಸಂತೋಷ್ ಮುಖ್ಯಮಂತ್ರಿ ಅಭ್ಯರ್ಥಿ?
ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಬಿಜೆಪಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡುವ ಸಾಧ್ಯತೆ ಇದೆ ಕೆಲ ಬಿಜೆಪಿ ಮೂಲಗಳು ಹೇಳುತ್ತವೆ. ಆದರೆ ಸಂತೋಷ್ ಈ ಮಾತನ್ನು ತಿರಸ್ಕರಿಸುತ್ತಾರೆ.

ಬಿಎಸ್ ವೈ ಪ್ಲ್ಯಾನ್ ಬಿ
ಆರ್ ಎಸ್ ಎಸ್ ನಾಯಕರೊಂದಿಗೆ ನಿರಂತರವಾಗಿ ವಿನಂತಿ ಮಾಡಿಕೊಳ್ಳುತ್ತ ಸುಸ್ತಾಗಿ ಹೋಗಿರುವ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೊಂದಿಗೂ ಸಂಪರ್ಕದಲ್ಲಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ












Click it and Unblock the Notifications