ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಯ ಅನುಸರಿಸಿದ ಯಡಿಯೂರಪ್ಪ: ಬಜೆಟ್‌ ಗೆ ಸಲಹೆ ನೀಡಲು ಮನವಿ

|
Google Oneindia Kannada News

ಬೆಂಗಳೂರು, ಜನವರಿ 09: ಕೇಂದ್ರ ಬಜೆಟ್‌ಗೆ ಸಲಹೆ ನೀಡುವಂತೆ ಪ್ರಧಾನಿ ಮೋದಿ ಅವರು ಮನವಿ ಮಾಡಿದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಸಹ ರಾಜ್ಯ ಬಜೆಟ್‌ಗೆ ಸಲಹೆ ನೀಡಿರೆಂದು ಜನರಲ್ಲಿ ಮನವಿ ಮಾಡಿದ್ದಾರೆ.

ಮಾರ್ಚ್ 5 ರಂದು ಮಂಡಿಸಲಿರುವ ರಾಜ್ಯ ಬಜೆಟ್ ಅನ್ನು ಸಮಾಜದ ಎಲ್ಲಾ ವರ್ಗದ, ಸ್ತರದ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಸಾಕಾರಕ್ಕೆ ಪೂರಕವಾಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿರುವ ಯಡಿಯೂರಪ್ಪ, ಇದಕ್ಕೆ ಜನರು ತಮ್ಮ ಸಲಹೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್‌ಗೆ ಸಲಹೆ ಕೊಡಿ: ಜನರಲ್ಲಿ ಮನವಿ ಮಾಡಿದ ಮೋದಿಕೇಂದ್ರ ಬಜೆಟ್‌ಗೆ ಸಲಹೆ ಕೊಡಿ: ಜನರಲ್ಲಿ ಮನವಿ ಮಾಡಿದ ಮೋದಿ

ಮುಖ್ಯಮಂತ್ರಿಗಳು ಈಗಾಗಲೇ ಇಲಾಖಾವಾರು ಪ್ರಮುಖರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ. ರಾಜ್ಯ ಬಜೆಟ್ ಸರ್ವಸ್ಪರ್ಶಿಯಾಗುವಂತೆ ಮಾಡುವ ನಿಟ್ಟಿನಲ್ಲಿ ನಿರಂತರ ಚಿಂತನೆ ನಡೆಸಿರುವ ಮುಖ್ಯಮಂತ್ರಿಗಳು ವಿವಿಧ ಕ್ಷೇತ್ರಗಳಲ್ಲಿನ ಅವಶ್ಯಕತೆಗಳನ್ನು ಗಮನದಲ್ಲಿರಿಸಿ ಬಜೆಟ್ ರೂಪಿಸುವ ಆಶಯ ಹೊಂದಿದ್ದಾರೆ.

Yediyurappa Asks To Give Suggestions For Karnataka Budget 2020

ಆದ್ದರಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳು ಮತ್ತು ನೀಡಬೇಕಾದ ಆದ್ಯತೆ ಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಬಹುದಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿಗಳು ವಿಶೇಷ ಮುತುವರ್ಜಿ ವಹಿಸಿ ಜನರ ಅಪೇಕ್ಷೆಗೆ ಪೂರಕವಾಗಿ ಸ್ಪಂದಿಸಲಿದ್ದಾರೆ.

ಇಂದಿನಿಂದ ಬಜೆಟ್ ತಯಾರಿ ಆರಂಭಿಸಿದ ಬಿ ಎಸ್ ವೈ, ಯಾರಿಗೆ ಏನೂ ಕೊಡ್ತಾರೆ?ಇಂದಿನಿಂದ ಬಜೆಟ್ ತಯಾರಿ ಆರಂಭಿಸಿದ ಬಿ ಎಸ್ ವೈ, ಯಾರಿಗೆ ಏನೂ ಕೊಡ್ತಾರೆ?

ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ವ್ಯಕ್ತಿಗಳು ಹಾಗೂ ಸಂಘಟನೆಗಳು ತಮ್ಮ ಸಲಹೆಗಳನ್ನು ಶಂಕರಗೌಡ ಪಾಟೀಲ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಕೊಠಡಿ ಸಂಖ್ಯೆ 305, ಮೂರನೇ ಮಹಡಿ, ವಿಧಾನಸೌಧ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದಾಗಿದೆ. ಜನವರಿ 31 ರ ಒಳಗಾಗಿ ಸಲಹೆಗಳು ವಿಳಾಸವನ್ನು ತಲುಪಬೇಕಾಗಿದೆ.

English summary
CM Yediyurappa asks people to give suggestion to add in Karnataka budget 2020. People can send suggestion to Vidhan Soudha address before January 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X