ನಿಖಿಲ್ ನಿಶ್ಚಿತಾರ್ಥ; ಕೈ ಕುಲುಕಿದ ಹಾಲಿ, ಮಾಜಿ ಮುಖ್ಯಮಂತ್ರಿಗಳು
Recommended Video
ಬೆಂಗಳೂರು, ಫೆಬ್ರವರಿ 10 : ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥದಲ್ಲಿ ಮಾಜಿ ಮುಖ್ಯಮಂತ್ರಿಗಳ ಮುಖಾಮುಖಿಯಾಗಿದೆ. ರಾಜಕೀಯವೇ ಬೇರೆ, ಗೆಳೆತನವೇ ಬೇರೆ ಎಂಬುದು ಕರ್ನಾಟಕದಲ್ಲಿ ಹಲವು ಬಾರಿ ಸಾಬೀತಾಗಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸೋಮವಾರ ನಿಖಿಲ್ ಕುಮಾರಸ್ವಾಮಿ, ರೇವತಿ ನಿಶ್ಚಿತಾರ್ಥ ನಡೆಯಿತು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುಟುಂಬ ಸದಸ್ಯರು, ಆಪ್ತರ ಸಮ್ಮುಖದಲ್ಲಿ ರೇವತಿಗೆ ನಿಖಿಲ್ ಕುಮಾರಸ್ವಾಮಿ ವಜ್ರದ ಉಂಗುರ ತೊಡಿಸಿದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಸಮಾರಂಭದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭಾಶಯಗಳನ್ನು ಸಲ್ಲಿಸಿದರು. ಆಪ್ತರಿಗೆ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಆಹ್ವಾನ ನೀಡಿದ್ದರು.
ರೇವತಿ ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ಅಣ್ಣ ಮಂಜುನಾಥ್ ಪುತ್ರಿ. ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭಾಶಯ ಹೇಳಿದರು.

ಹಾಲಿ, ಮಾಜಿ ಮುಖ್ಯಮಂತ್ರಿಗಳ ಮುಖಾಮುಖಿ
ಎಚ್. ಡಿ. ಕುಮಾರಸ್ವಾಮಿ ಪುತ್ರನ ನಿಶ್ಚಿತಾರ್ಥದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಾಲ್ಗೊಂಡಿದ್ದರು. ನಿಖಿಲ್ಗೆ ಶುಭಾಶಯ ಸಲ್ಲಿಸಿದ ನಾಯಕರು ಕುಮಾರಸ್ವಾಮಿ ಕೈ ಕುಲುಕಿದರು. ನಿಶ್ಚಿತಾರ್ಥ ಹಾಲಿ, ಮಾಜಿ ಮುಖ್ಯಮಂತ್ರಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು.

ಗಣ್ಯರಿಂದ ಶುಭಾಶಯ
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸೋಮವಾರ ಬೆಳಗ್ಗೆ 10.30 ರಿಂದ 12.30ರ ತನಕ ನಿಖಿಲ್ ಕುಮಾರಸ್ವಾಮಿ, ರೇವತಿ ನಿಶ್ಚಿತಾರ್ಥ ನಡೆಯಿತು. ಹಲವಾರು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದರು.

ದೇವೇಗೌಡರಿಂದ ಆಶೀರ್ವಾದ
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಪತ್ನಿ ಜೊತೆ ಬೆಳಗ್ಗೆಯೇ ಹೋಟೆಲ್ಗೆ ಆಗಮಿಸಿದ್ದರು. ಮೊಮ್ಮಗನ ನಿಶ್ಚಿತಾರ್ಥ ವೀಕ್ಷಣೆ ಮಾಡಿ ಆಶೀರ್ವಾದ ಮಾಡಿದರು. ನಿಖಿಲ್ ವಿವಾಹವಾಗುತ್ತಿರುವ ರೇವತಿ ಬೆಂಗಳೂರಿನ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ಅಣ್ಣ ಮಂಜುನಾಥ್ ಪುತ್ರಿ.

ಏಪ್ರಿಲ್ನಲ್ಲಿ ವಿವಾಹ
ಎಚ್. ಡಿ. ದೇವೇಗೌಡ ಕುಟುಂಬ ಸದಸ್ಯರು, ಕುಟುಂಬದ ಆಪ್ತರ ಸಮ್ಮುಖದಲ್ಲಿ ರೇವತಿಗೆ ನಿಖಿಲ್ ಕುಮಾರಸ್ವಾಮಿ ವಜ್ರದ ಉಂಗುರ ತೊಡಿಸಿದರು. ಏಪ್ರಿಲ್ನಲ್ಲಿ ವಿವಾಹ ನಡೆಯಲಿದ್ದು, ಸ್ಥಳ ಇನ್ನೂ ನಿಗದಿಯಾಗಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications