ಎಲ್ಲಾ ನಿಗಮ/ಮಂಡಳಿ ಅಧ್ಯಕ್ಷರ ನೇಮಕ ರದ್ದುಗೊಳಿಸಿದ ಸಿಎಂ
ಬೆಂಗಳೂರು, ಜುಲೈ 29 : ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುತ್ತಿದ್ದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿಗಮ-ಮಂಡಳಿ ಕಡೆ ಗಮನ ಹರಿಸಿದ್ದಾರೆ. ಎಲ್ಲಾ ನಿಗಮ-ಮಂಡಳಿ ಅಧ್ಯಕ್ಷರ ನೇಮಕವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ಸಂಜೆ ಕರ್ನಾಟಕ ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ನಿಗಮ/ಮಂಡಳಿ/ಪ್ರಾಧಿಕಾರ/ಆಯೋಗ ಸಂಸ್ಥೆಗಳಲ್ಲಿನ ಅಧಿಕಾರೇತರ ಅಧ್ಯಕ್ಷರು/ಉಪಾಧ್ಯಕ್ಷರು/ನಿರ್ದೇಶಕರು/ಸದಸ್ಯರ ನಾಮ ನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
ಯಡಿಯೂರಪ್ಪ ಸಂಪುಟ : 2 ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಠಿ?
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ನಡೆದಿತ್ತು. ಹೊಸ ಸರ್ಕಾರ ಬರುತ್ತಿದ್ದಂತೆ ಎಲ್ಲಾ ನೇಮಕಾತಿಗಳನ್ನು ರದ್ದುಪಡಿಸಲಾಗಿದೆ. ಸರ್ಕಾರ ಶೀಘ್ರದಲ್ಲಿಯೇ ಹೊಸ ನೇಮಕಗಳನ್ನು ಮಾಡಲಿದೆ.
ವಿಶ್ವಾಸಮತ ಗೆದ್ದ ಯಡಿಯೂರಪ್ಪ, 6 ತಿಂಗಳು ಸರ್ಕಾರ ಸೇಫ್
ಈ ಬಗ್ಗೆ ಮುಂದಿನ ಆದೇಶ ಆಗುವ ತನಕ ಈ ನಿಗಮ/ಮಂಡಳಿ/ಪ್ರಾಧಿಕಾರ/ಆಯೋಗ ಸಂಸ್ಥೆಗಳಿಗೆ ಸಂಬಂಧಪಟ್ಟ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೂ ನಿಂತಿಲ್ಲ ಆಪರೇಷನ್ ಕಮಲ?
ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ನಿಗಮ/ಮಂಡಳಿ ನೇಮಕದ ವಿಚಾರದಲ್ಲಿ ಜಟಾಪಟಿ ನಡೆದಿತ್ತು. ಕಾಂಗ್ರೆಸ್ ಶಿಫಾರಸು ಮಾಡಿದ್ದ 19 ನಿಗಮ/ಮಂಡಳಿಗಳ ಪೈಕಿ 14 ಜನರನ್ನು ಮಾತ್ರ ನೇಮಕ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟಿದ್ದರು.
ಮತ್ತೊಂದು ಕಡೆ ಜೆಡಿಎಸ್ನ ಶಾಸಕರನ್ನು ನಿಗಮ/ಮಂಡಳಿಗಳಿಗೆ ನೇಮಕ ಮಾಡಿರಲಿಲ್ಲ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಶಾಸಕರ ನೇಮಕದ ಬಗ್ಗೆ ಚರ್ಚೆ ಆರಂಭವಾಗಿತ್ತು. ಆದರೆ ಮೈತ್ರಿ ಸರ್ಕಾರ ಬಹುಮತವಿಲ್ಲದೇ ಪತನಗೊಂಡು ಹೊಸ ಸರ್ಕಾರ ಬಂದಿದೆ.