ಸಿಹಿ ಸುದ್ದಿ: ಕನ್ನಡಿಗರಿಗೆ 75% ಉದ್ಯೋಗ ಮೀಸಲಾತಿಗೆ ಶೀಘ್ರದಲ್ಲೇ ಆದೇಶ
ಬೆಂಗಳೂರು, ಫೆಬ್ರವರಿ 07: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂಬುದು ಕನ್ನಡಿಗರ ಬಹುದಿನಗಳ ಪ್ರಬಲ ಒತ್ತಾಯ. ಈ ಬೇಡಿಕೆ ಕೆಲವೇ ದಿನಗಳಲ್ಲಿ ಈಡೇರುವ ಸಾಧ್ಯತೆ ಇದೆ.
ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಎರಡರಲ್ಲೂ ಕನ್ನಡಿಗರಿಗೆ 75% ಮೀಸಲಾತಿ ಕೊಡುವ ಹೊಸ ಆದೇಶವನ್ನು ಹೊರಡಿಸಲು ಯಡಿಯೂರಪ್ಪ ಸಕಲ ತಯಾರಿ ನಡೆಸಿದೆ.
ಕಾಯ್ದೆ ಜಾರಿಯಾದರೆ ಖಾಸಗಿ ವಲಯಗಳಲ್ಲಿಯೂ ಕನ್ನಡಿಗರಿಗೆ ಶೇ 75% ಉದ್ಯೋಗ ನೀಡಲೇ ಬೇಕಾಗುತ್ತದೆ. ಯಡಿಯೂರಪ್ಪ ಅವರ ಈ ಹೊಸ ಕಾಯ್ದೆಯು ಕನ್ನಡಿಗರಿಗೆ ಉದ್ಯೋಗ ನೀಡುವ ಜೊತೆಗೆ, ಕನ್ನಡಿಗರು ಉದ್ಯೋಗ ಅರಸಿ ಬೇರೆಡೆ ಹೋಗುವುದನ್ನು ಹಾಗೂ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಬರುವವರನ್ನು ನಿಯಂತ್ರಿಸಲಿದೆ.

ಆಂಧ್ರಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ
ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು ಇದೇ ರೀತಿಯ ಆದೇಶ ಹೊರಡಿಸಿದ್ದು, ಆಂಧ್ರ ಪ್ರದೇಶದಲ್ಲಿ ತೆಲುಗರಿಗೆ ಶೇ 75% ಉದ್ಯೋಗ ಮೀಸಲಾತಿ ನೀಡಿದೆ. ಇದೇ ಮಾದರಿಯನ್ನು ಕರ್ನಾಟಕದಲ್ಲಿಯೂ ಅನುಸರಿಸುವ ಯತ್ನ ಈಗಾಗಲೇ ಜಾರಿಯಲ್ಲಿದೆ.

ಸಚಿವ ಸುರೇಶ್ ಕುಮಾರ್ ಹೇಳಿಕೆ
ಶಿಕ್ಷಣ ಮತ್ತು ಕಾರ್ಮಿಕ ಸಚಿವ ಸಚಿವ ಸುರೇಶ್ ಕುಮಾರ್ ಮಾತನಾಡಿ, 'ಇದು ಯಾರ ವಿರುದ್ಧವೂ ತರತಮ್ಯ ಮಾಡಲು ತರಲಾಗುತ್ತಿರುವ ಕಾಯ್ದೆಯಲ್ಲ ಬದಲಿಗೆ ಸ್ಥಳೀಯರಿಗೆ ಹೆಚ್ಚು ಅವಕಾಶ ಒದಗಿಸಲು ಮಾಡಲಾಗುತ್ತಿರುವ ಯತ್ನ' ಎಂದಿದ್ದಾರೆ.

ಹಲವು ವರ್ಷಗಳಿಂದಲೂ ನಡೆಯುತ್ತಿದೆ ಹೋರಾಟ
ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕೊಡಬೇಕು ಎಂದು ಹಲವು ವರ್ಷಗಳಿಂದಲೂ ಹೋರಾಟ ನಡೆಯುತ್ತಲೇ ಇತ್ತು. ಕನ್ನಡಪರ ಸಂಘಟನೆಗಳು, ಕನ್ನಡ ಸಾಹಿತ್ಯ ವಲಯ ಸಹ ಉದ್ಯೋಗ ಮೀಸಲಾತಿಗೆ ಒತ್ತಾಯ ಮಾಡುತ್ತಲೇ ಇದ್ದವು.

ಕನ್ನಡಿಗರ ನಿರುದ್ಯೋಗ ಸಮಸ್ಯೆ ನಿವಾರಿಸಲಿದೆಯೇ?
ಯಡಿಯೂರಪ್ಪ ಅವರು ಬಜೆಟ್ ಸಮಾವೇಶದಲ್ಲಿ ಅಥವಾ ನಂತರ ಉದ್ಯೋಗ ಮೀಸಲಾತಿ ಆದೇಶ ಹೊರಡಿಸುವ ಸಾಧ್ಯತೆ ಇದೆ. ಮೀಸಲಾತಿ ಆದೇಶ ಕನ್ನಡಿಗರ ನಿರುದ್ಯೋಗ ಸಮಸ್ಯೆ ದೂರ ಮಾಡುವ ಜೊತೆಗೆ ಬೆಂಗಳೂರಿನ ವಲಸೆ ಸಮಸ್ಯೆ ಬಗೆಹರಿಸುತ್ತದೆಯೇ ಕಾದು ನೋಡಬೇಕಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications