ಕೊನೆಗೂ ಸಂಸದ ಶ್ರೀನಿವಾಸ ಪ್ರಸಾದ್ ಸಮಾಧಾನ ಮಾಡಿದ ಯಡಿಯೂರಪ್ಪ!
ಬೆಂಗಳೂರು, ನ. 25: ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿ ಗರಂ ಆಗಿದ್ದ ಚಾಮರಾಜನಗರ ಸಂಸದ ವಿ. ಶ್ರೀನಿವಾಸಪ್ರಸಾದ್ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಮಾಧಾನ ಮಾಡಿದ್ದಾರೆ. ಸುತ್ತೂರು ಶ್ರೀಗಳ ಎದುರೇ ತಮ್ಮ ಅಸಮಾಧಾನವನ್ನು ಸಂಸದ ವಿ. ಶ್ರೀನಿವಾಸ ಪ್ರಸಾದ್ ವ್ಯಕ್ತಪಡಿಸಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸುತ್ತೂರು ಕ್ಷೇತ್ರದಲ್ಲಿ ಅತಿಥಿ ಗೃಹ ಮತ್ತು ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

"ಸಿಎಂ ಆಗುವ ತನಕ ನಾನು ಬೇಕಿತ್ತು, ಈಗ ನನ್ನ ದರ್ದಿಲ್ಲ: ನೋಡ್ಕೋತ್ತೀನಿ''
ಅದೇ ಸಂದರ್ಭದಲ್ಲಿ ತಾವು ಶಿಫಾರಸು ಮಾಡಿದ್ದ ಒಬ್ಬರಿಗೂ ನಿಗಮ-ಮಂಡಳಿಯಲ್ಲಿ ಸ್ಥಾನ ನೀಡದಕ್ಕೆ ಶ್ರೀನಿವಾಸ ಪ್ರಸಾದ್ ಅವರು ಗರಂ ಆಗಿದ್ದರು. ಸುತ್ತೂರು ಶ್ರೀ ಎದುರೇ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀನಿವಾಸಪ್ರಸಾದ್ ಅವರು, ಅಧಿಕಾರಕ್ಕೆ ಬರುವಾಗ ನಾವು ಬೇಕಿತ್ತು. ಈಗ ನಾವು ಹೇಳಿದ ಒಬ್ಬರಿಗೂ ಅಧ್ಯಕ್ಷ ಸ್ಥಾನ ನೀಡಲ್ಲ ಅಂದರೆ ಅದರ ಅರ್ಥ ಏನು? ಎಂದು ಪ್ರಶ್ನೆ ಮಾಡಿದ್ದರು ಎಂಬ ಮಾಹಿತಿ ಬಂದಿದೆ.

Recommended Video
ಕೋಪಗೊಂಡಿದ್ದ ಸಂಸದ ಶ್ರೀನಿವಾಸಪ್ರಸಾದ್ ಅವರನ್ನು ಸಮಾಧಾನ ಪಡಿಸಿದ ಯಡಿಯೂರಪ್ಪ ಅವರು, ಆಯ್ತು, ಇರಿ. ಇನ್ನೂ ಮೂರು ದಿನದಲ್ಲಿ ಎಲ್ಲವನ್ನೂ ಸರಿ ಮಾಡುತ್ತೇನೆ. ನಿಮ್ಮ ಶಿಫಾರಸುಗಳನ್ನು ನೋಡಿಕೊಂಡು ಸರಿ ಮಾಡುತ್ತೇನೆ. ಸಿಟ್ಟು ಮಾಡಿಕೊಳ್ಳಬೇಡಿ ಎಂದು ಸಮಾಧಾನಪಡಿಸಿದ್ದಾರೆ. ಅದೇ ಸಂದರ್ಭದಲ್ಲಿ ಮತ್ತೊಮ್ಮೆ ಶ್ರೀನಿವಾಸಪ್ರಸಾದ್ ಅವರಿಂದ ಬೆಂಬಲಿಗರ ಪಟ್ಟಿಯನ್ನು ಯಡಿಯೂರಪ್ಪ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸುತ್ತೂರು ಮಠದ ಒಳಾಂಗಣದಲ್ಲಿ ನಡೆದ ಈ ಎಲ್ಲ ಬೆಳವಣಿಗೆಗಳು ನಡೆದವು ಎಂಬ ಮಾಹಿತಿ ಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications