ಬಿಎಸ್ವೈಗೆ ಉನ್ನತ ಸ್ಥಾನಮಾನ: ಕಾರಣ ಬಿಚ್ಚಿಟ್ಟ ಸಿ.ಟಿ.ರವಿ
ಬೆಂಗಳೂರು, ಆಗಸ್ಟ್ 17: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿಯ ಅತ್ಯುನ್ನತ ಸಂಸದೀಯ ಮಂಡಳಿಗೆ ಆಯ್ಕೆಯಾಗಿರುವ ಬಗ್ಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಿ.ಟಿ.ರವಿ, "ಯಡಿಯೂರಪ್ಪನವರು ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ, ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿ, ಈಗ ಪಕ್ಷದ ಅತ್ಯುನ್ನತ ಸಂಸದೀಯ ಮಂಡಳಿಗೆ ಆಯ್ಕೆಯಾಗಿದ್ದಾರೆ. ಇದು ನಮಗೆಲ್ಲಾ ಸಂತೋಷದ ವಿಷಯ"ಎಂದು ರವಿ ಹೇಳಿದರು.
"ಕರ್ನಾಟಕದಿಂದ ಯಡಿಯೂರಪ್ಪ, ತೆಲಂಗಾಣದಿಂದ ಲಕ್ಷ್ಮಣ, ತಮಿಳುನಾಡಿನ ವಾನತಿ ಶ್ರೀನಿವಾಸನ್ ಸೇರಿದಂತೆ ಮೂವರು ಸಂಸದೀಯ ಮಂಡಳಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಡಿಯೂರಪ್ಪನವರು ಸಲಹೆ, ಮಾರ್ಗದರ್ಶನ, ಮುಂದಾಳುತ್ವವನ್ನು ವಹಿಸಿಕೊಳ್ಳಲಿದ್ದಾರೆ"ಎಂದು ಸಿ.ಟಿ.ರವಿ ಹೇಳಿದರು.

"ಬಿಎಸ್ವೈ ಅವರು ಆಯ್ಕೆಯಾದ ನಂತರ ಹಲವು ರೀತಿಯ ಊಹಾಪೋಹಗಳಿಗೆ ತೆರೆಬಿದ್ದಿದೆ ಎಂದು ನಾನು ಭಾವಿಸುತ್ತೇನೆ. ಯಾರು ಯಾರನ್ನು ಎಲ್ಲಿ ಇಡಬೇಕು, ಎಲ್ಲಿ ಕಟ್ಟಿಹಾಕಬೇಕು ಎನ್ನುವುದನ್ನು ಇನ್ನು ಮುಂದೆ ಯಡಿಯೂರಪ್ಪನವರು ನಿರ್ಧರಿಸುತ್ತಾರೆ"ಎಂದು ಸಿ.ಟಿ.ರವಿ ಹೇಳಿದರು.
"ಈಗಾಗಲೇ ಕೆಲವರು ಟವೆಲ್ ಹಾಕಿಕೊಂಡಿದ್ದಾರೆ, ಪಕ್ಷ ಈಗಾಗಲೇ ಅಧಿಕಾರಕ್ಕೆ ಬಂದೇ ಬಿಟ್ಟಿದೆ ಎಂದು ತಿರುಗಾಡುತ್ತಿರುವವರನ್ನು ಕಟ್ಟಿಹಾಕಲೆಂದೇ ಯಡಿಯೂರಪ್ಪನವರು ಸಂಸದೀಯ ಮಂಡಳಿಗೆ ಹೋಗಿರುವುದು"ಎಂದು ಸಿ.ಟಿ.ರವಿ, ಕಾಂಗ್ರೆಸ್ಸಿಗೆ ಪರೋಕ್ಷ ಎಚ್ಚರಿಕೆಯನ್ನು ನೀಡಿದರು.

"ನಾನು..ನಾನು ಎಂದು ತಿರುಗಾಡಿಕೊಂಡು, ಸೂಟುಬೂಟು ಹಾಕಿಕೊಂಡು ತಿರುಗಾಡುತ್ತಿದ್ದ ವಿಪಕ್ಷಗಳ ನಾಯಕರಿಗೆ ಇಂದಿನ ನಿರ್ಧಾರ ಉತ್ತರವನ್ನು ಕೊಟ್ಟಿದೆ. ನಮ್ಮಲ್ಲಿ ಸಿಎಂ ಖುರ್ಚಿ ಖಾಲಿಯಿಲ್ಲ, ಬೊಮ್ಮಾಯಿಯವರು ಸಿಎಂ ಆಗಿ ಮುಂದುವರಿಯುತ್ತಾರೆ"ಎಂದು ಸಿ.ಟಿ.ರವಿ, ವಿಪಕ್ಷಗಳಿಗೆ ತಿರುಗೇಟು ನೀಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications