ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲಮನ್ನಾ: ಮೀನುಗಾರರಿಗೆ ಬಂಪರ್ ಖುಷಿ ನೀಡಿದ ಯಡಿಯೂರಪ್ಪ

|
Google Oneindia Kannada News

Recommended Video

ಕರಾವಳಿ ಭಾಗದ ಮೀನುಗಾರರಿಗೆ ಸಿಹಿ ಸುದ್ದಿ ನೀಡಿದ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಂಗಳೂರು, ಜುಲೈ 29: ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಅವರು ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇರಿಸಿದ್ದಾರೆ.

ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. ಈ ಮೂರು ಜಿಲ್ಲೆಗಳ ಮೀನುಗಾರರ ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್ ಯಡಿಯೂರಪ್ಪ ಅವರು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ರೈತರಿಗೆ, ನೇಕಾರರಿಗೆ ಉಡುಗೊರೆ ಕೊಟ್ಟ ಯಡಿಯೂರಪ್ಪ

ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಮತ್ತು ಇತರೆ ಅಧಿಕಾರಿಗಳೊಂದಿಗೆ ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದ ಜುಲೈ 26ರಂದೇ ಸಂಪುಟ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಮೀನುಗಾರರ ಸಾಲಮನ್ನಾ ಕುರಿತು ತೀರ್ಮಾನ ತೆಗೆದುಕೊಂಡು ಸೂಚನೆ ನೀಡಲಾಗಿದೆ.

60 ಕೋಟಿ ರೂಪಾಯಿ ಸಾಲ

60 ಕೋಟಿ ರೂಪಾಯಿ ಸಾಲ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ 23,507 ಮೀನುಗಾರರು 2017-18 ಮತ್ತು 2018-19 ವಾಣಿಜ್ಯ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ಸುಮಾರು 60 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ. ಆ ಸಾಲವನ್ನು ಮನ್ನಾ ಮಾಡಲು ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ನಿರ್ಗಮನಕ್ಕೂ ಮುನ್ನಾ ಬಡವರಿಗೆ ಭರ್ಜರಿ ಉಡುಗೊರೆ ನೀಡಿದ ಕುಮಾರಸ್ವಾಮಿನಿರ್ಗಮನಕ್ಕೂ ಮುನ್ನಾ ಬಡವರಿಗೆ ಭರ್ಜರಿ ಉಡುಗೊರೆ ನೀಡಿದ ಕುಮಾರಸ್ವಾಮಿ

50 ಸಾವಿರದವರೆಗಿನ ಸಾಲಮನ್ನಾ

50 ಸಾವಿರದವರೆಗಿನ ಸಾಲಮನ್ನಾ

ಕಳೆದ ಎರಡು ವರ್ಷಗಳಲ್ಲಿ ಮೀನುಗಾರರು ಒಟ್ಟು 60 ಕೋಟಿ ರೂ. ಸಾಲ ಮನ್ನಾ ಮಾಡಲು ಆದೇಶಿಸಲಾಗಿದೆ. ಇದುವರೆಗಿನ 50 ಸಾವಿರ ರೂಪಾಯಿ ವರೆಗಿನ ಸಾಲಮನ್ನಾ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಯಡಿಯೂರಪ್ಪ ಅವರು ಮೀನುಗಾರರಿಗೆ ಮುಂಗಾರಿನ ಉಡುಗೊರೆ ನೀಡಿದ್ದಾರೆ.

ನೇಕಾರರ ಸಾಲಮನ್ನಾ ಘೋಷಣೆ

ನೇಕಾರರ ಸಾಲಮನ್ನಾ ಘೋಷಣೆ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆಯ ಅವಧಿಯಲ್ಲಿಯೇ ನೇಕಾರರ ಸಂಪೂರ್ಣ ಸಾಲ ಮನ್ನಾ ಮಾಡುವ ಮೂಲಕ ಯಡಿಯೂರಪ್ಪ ಅವರು ಭರ್ಜರಿ ಉಡುಗೊರೆ ನೀಡಿದ್ದರು. ಸರ್ಕಾರದ ಕಾರ್ಯದರ್ಶಿ ಅವರೊಂದಿಗೆ ಸಂಪುಟ ಸಭೆ ನಡೆಸಿದ್ದ ಅವರು, ನೂರು ಕೋಟಿ ರೂಪಾಯಿಗೂ ಹೆಚ್ಚಿರುವ ನೇಕಾರರ ಸಾಲವನ್ನು ಮನ್ನಾಮಾಡಿದ್ದರು.

ರೈತರ ಸಾಲ ಮನ್ನಾ ಬಿಜೆಪಿ ಸರ್ಕಾರದ ಮೊದಲ ಆದ್ಯತೆ: ಈಶ್ವರಪ್ಪ ರೈತರ ಸಾಲ ಮನ್ನಾ ಬಿಜೆಪಿ ಸರ್ಕಾರದ ಮೊದಲ ಆದ್ಯತೆ: ಈಶ್ವರಪ್ಪ

ರೈತರಿಗೆ ನಾಲ್ಕು ಸಾವಿರ

ರೈತರಿಗೆ ನಾಲ್ಕು ಸಾವಿರ

ನೇಕಾರರ ಸಾಲಮನ್ನಾದೊಂದಿಗೆ ರೈತರಿಗೂ ಯಡಿಯೂರಪ್ಪ ಗಿಫ್ಟ್ ನೀಡಿದ್ದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದಿಂದ ನೀಡುತ್ತಿರುವ ವಾರ್ಷಿಕ ಆರು ಸಾವಿರ ರೂಪಾಯಿ ಜತೆಗೆ ರಾಜ್ಯ ಸರ್ಕಾರದಿಂದ ನಾಲ್ಕು ಸಾವಿರ ರೂಪಾಯಿ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಕೇಂದ್ರದಿಂದ ಮೂರು ಕಂತುಗಳಲ್ಲಿ ತಲಾ ಎರಡು ಸಾವಿರ ರೂಪಾಯಿ ಸಿಗುತ್ತಿದ್ದು, ರಾಜ್ಯ ಸರ್ಕಾರವು ಎರಡು ಕಂತುಗಳಲ್ಲಿ ತಲಾ ಎರಡು ಸಾವಿರ ರೂಪಾಯಿ ಹಣವನ್ನು ರೈತರ ಖಾತೆಗೆ ಜಮಾ ಮಾಡಲಿದೆ. ಇದರಿಂದ ರಾಜ್ಯ ರೈತರಿಗೆ ವಾರ್ಷಿಕ ಹತ್ತು ಸಾವಿರ ರೂಪಾಯಿ ಸಿಗಲಿದೆ.

English summary
CM Yediyurappa signed for loan waive for Rs 60 crore of fishers in 3 districts of coastal Karnataka upto Rs 50,000
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X