ಏನೂ ಭಯ ಪಡದೇ ಸಂಪುಟ ವಿಸ್ತರಣೆ ಮಾಡಿ: ಸಿಎಂ ಬಿಎಸ್ವೈಗೆ ಜೆಡಿಎಸ್ ಅಭಯ
ಬಿಜೆಪಿ ವರಿಷ್ಠ ಅಮಿತ್ ಶಾ ಅವರಿಂದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುಮತಿ ಏನೋ ಸಿಕ್ಕಿದೆ. ಆದರೆ, ಕೆಲವರನ್ನು ಸಮಾಧಾನ ಪಡಿಸುವುದೇ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಒಂದು ಕಡೆ ಸೋತವರಿಗೂ ಸಚಿವ ಸ್ಥಾನ ನೀಡಬೇಕು ಎನ್ನುವ ವಿಚಾರದಲ್ಲಿ ಎಚ್.ವಿಶ್ವನಾಥ್ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿರುವುದು, "ಯಡಿಯೂರಪ್ಪನವರ ಮನಸ್ಸಿನಲ್ಲಿ ನಾವಿದ್ದೇವೆ" ಎಂದು ಎಂ.ಟಿ.ಬಿ ನಾಗರಾಜ್ ಹೇಳಿರುವುದು ಬಿಎಸ್ವೈ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಈ ಎಲ್ಲಾ ಜಂಜಾಟದ ನಡುವೆ, ಜೆಡಿಎಸ್ ಶಾಸಕರೊಬ್ಬರು, ಮುಖ್ಯಮಂತ್ರಿಗಳಿಗೆ ಅಭಯ ನೀಡಿದ್ದು, "ಏನೂ ಭಯ ಪಡದೇ ಸಂಪುಟ ವಿಸ್ತರಣೆ ಮಾಡಿ" ಎಂದು ಹೇಳಿರುವುದು, ಸಂಚಲನ ಮೂಡಿಸಿದೆ.
ರಾಜಕೀಯ ತಂತ್ರಗಾರಿಕೆ ರೂಪಿಸುವಲ್ಲಿ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಅವರ ಜೊತೆ, ಕುಮಾರಸ್ವಾಮಿ ಮಾತುಕತೆ ನಡೆಸುತ್ತಾರೆ ಎನ್ನುವ ಸುದ್ದಿಯ ನಡುವೆ, ಜೆಡಿಎಸ್ ಶಾಸಕರ ಹೇಳಿಕೆ, ಪಕ್ಷಕ್ಕೆ ಇರಿಸುಮುರಿಸು ತಂದಿದೆ.

ಬಿಎಸ್ವೈ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದ ಸುರೇಶ್ ಗೌಡ
ಈ ಹಿಂದೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ, ಯಡಿಯೂರಪ್ಪ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು. ಸುರೇಶ್ ಗೌಡ, ಜೆಡಿಎಸ್ ಪಕ್ಷ ಬಿಟ್ಟು ಬಿಜೆಪಿ ಸೇರಲಿದ್ದಾರೆಯೇ ಎನ್ನುವ ಗುಸುಗುಸು ಸುದ್ದಿ ಹರಿದಾಡುತ್ತಿತ್ತು. "ಸಿಎಂ ಯಡಿಯೂರಪ್ಪನವರು ಹಿರಿಯರು, ಹೀಗಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದೇನೆ. ಅವರ ಜಾಗದಲ್ಲಿ ಸಿದ್ದರಾಮಯ್ಯ ಇದ್ದಿದ್ದರೂ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದೆ" ಎಂದು ಅವರು ಸ್ಪಷ್ಟನೆಯನ್ನು ನೀಡಿದ್ದರು.

ಯಡಿಯೂರಪ್ಪನವರ ಸರ್ಕಾರವನ್ನು ಬೀಳುವುದಕ್ಕೆ ಬಿಡುವುದಿಲ್ಲ
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಗೌಡ, "ಯಾವುದೇ ಕಾರಣಕ್ಕೂ ನಾವು ಯಡಿಯೂರಪ್ಪನವರ ಸರ್ಕಾರವನ್ನು ಬೀಳುವುದಕ್ಕೆ ಬಿಡುವುದಿಲ್ಲ. ಅವರು ಯಾವುದೇ ತೊಂದರೆಯಿಲ್ಲದೇ ಇನ್ನುಳಿದ ಅವಧಿಗೆ ಸರಕಾರ ಮುನ್ನಡೆಸಬಹುದು" ಎಂದು ಹೇಳಿದ್ದಾರೆ.

ಯಡಿಯೂರಪ್ಪನವರಿಗೆ ಅಭಯ ನೀಡುತ್ತಿದ್ದೇವೆ
"ನಾವು ಈ ಮೂಲಕ ಯಡಿಯೂರಪ್ಪನವರಿಗೆ ಅಭಯ ನೀಡುತ್ತಿದ್ದೇವೆ. ಅವರಿಗೆ ಧೈರ್ಯ ತುಂಬುತ್ತೇವೆ, ಜೊತೆಗೆ, ಅವರ ಬೆನ್ನಿಗೆ ನಿಲ್ಲುತ್ತೇವೆ. ಈಗಿನ ಪರಿಸ್ಥಿತಿಯಲ್ಲಿ ಜನರಿಗಾಗಲಿ ಅಥವಾ ಯಾವುದೇ ಶಾಸಕರಿಗಾಗಲಿ ಮಧ್ಯಂತರ ಚುನಾವಣೆ ಬೇಕಾಗಿಲ್ಲ" ಎಂದು ಸುರೇಶ್ ಗೌಡ ಹೇಳಿದ್ದಾರೆ.

ಸುರೇಶ್ ಗೌಡ ಅವರನ್ನು ಬಿಜೆಪಿ ಸಂಪರ್ಕಿಸಿತ್ತು ಎಂದು ಎಚ್ಡಿಕೆ ಹೇಳಿದ್ದರು
ಸಚಿವ ಸ್ಥಾನದ ಹಂಚಿಕೆಯಲ್ಲಿ ಕೊಂಚ ಎಡವಟ್ಟಾದರೂ ಬಿಎಸ್ವೈ ನೇತೃತ್ವದ ಸರಕಾರ ಪತನಗೊಳ್ಳುವ ಸಾಧ್ಯತೆಯ ನಡುವೆ, ಜೆಡಿಎಸ್ ಶಾಸಕರೊಬ್ಬರು ನೀಡಿರುವ ಹೇಳಿಕೆ, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಹಿಂದೊಮ್ಮೆ, ಆಪರೇಶನ್ ಕಮಲದ ವೇಳೆ, ಸುರೇಶ್ ಗೌಡ ಅವರನ್ನು ಬಿಜೆಪಿ ಸಂಪರ್ಕಿಸಿತ್ತು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದನ್ನು, ಇಲ್ಲಿ ಸ್ಮರಿಸಿಕೊಳ್ಲಬಹುದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications