ಯಡಿಯೂರಪ್ಪ ರಾಜೀನಾಮೆಯನ್ನು ವಿಶಿಷ್ಟವಾಗಿ ಆಚರಿಸಿಕೊಂಡ ಯತ್ನಾಳ್
ಬೆಂಗಳೂರು, ಜುಲೈ 28: ಕಳೆದ ಒಂದು ವಾರದ ಬಿರುಸಿನ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
Recommended Video
ಬುಧವಾರ (ಜುಲೈ 28) ಬೆಳಗ್ಗೆ ಹನ್ನೊಂದು ಗಂಟೆಗೆ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲಿಗೆ, ಬಿಜೆಪಿಯ ಧೀಮಂತ ನಾಯಕ ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ.
ಒಟ್ಟಾರೆಯಾಗಿ, ಬಸವರಾಜ ಬೊಮ್ಮಾಯಿ ಆಯ್ಕೆಗೆ ಪಕ್ಷದಲ್ಲಿ ಸದ್ಯದ ಮಟ್ಟಿಗೆ ಹೆಚ್ಚಿನ ತಕರಾರೇನು ಶಾಸಕರಿಂದ ವ್ಯಕ್ತವಾಗಿಲ್ಲ. ಬೊಮ್ಮಾಯಿ ಆಯ್ಕೆಯ ಮೂಲಕ ಯಡಿಯೂರಪ್ಪನವರ ಕೈಮೇಲಾಗಿರುವುದು ಅತ್ಯಂತ ಸ್ಪಷ್ಟವಾಗಿದೆ.
ಅಲ್ಲಿಗೆ, ಯಡಿಯೂರಪ್ಪನವರನ್ನು ಟೀಕಿಸದೇ ರಾತ್ರಿ ಮಲಗದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿರಾಳರಾಗಿದ್ದಾರೆ. ಬಿಎಸ್ವೈ ರಾಜೀನಾಮೆಯನ್ನು ಯತ್ನಾಳ್ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ.

ಹೊಸ ನಾಯಕನ ಆಯ್ಕೆಗಾಗಿ ಶಾಸಕಾಂಗ ಪಕ್ಷದ ಸಭೆ
ಶಾಸಕಾಂಗ ಪಕ್ಷದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಯತ್ನಾಳ್, "ಬೊಮ್ಮಾಯಿ ಆಯ್ಕೆ ಮೂಲಕ ನಮ್ಮ ಬೇಡಿಕೆ ಈಡೇರಿದೆ. ಯಡಿಯೂರಪ್ಪನವರನ್ನು ಕೆಳಗಿಳಿಸಬೇಕಿತ್ತು, ಆ ಕೆಲಸ ನಡೆದಿದೆ. ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ"ಎಂದು ಅವರು ಹೇಳಿದ್ದಾರೆ.

ಯಡಿಯೂರಪ್ಪನವರ ಬಣದ ಮೇಲುಗೈ ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ
"ಇಲ್ಲಿ ಯಡಿಯೂರಪ್ಪನವರ ಬಣದ ಮೇಲುಗೈ ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ. ನಾವೆಲ್ಲರೂ ಬಿಜೆಪಿಯವರು. ಯಡಿಯೂರಪ್ಪನವರೇ ರಾಜೀನಾಮೆ ನೀಡಿದ್ದಾರಲ್ವಾ, ಇನ್ನೇನು ಮೇಲುಗೈ. ನಮ್ಮ ಡಿಮಾಂಡ್ ಅನ್ನು ಹೈಕಮಾಂಡ್ ಈಡೇರಿಸಿದ್ದಾರೆ"ಎಂದು ಯತ್ನಾಳ್ ಹೇಳಿದ್ದಾರೆ.

ಬಿಎಸ್ವೈ ರಾಜೀನಾಮೆ ನೀಡಿದ್ದಕ್ಕೆ ಗಡ್ಡ ಬೋಳಿಸಿಕೊಂಡಿದ್ದೇನೆ
ಬಿಎಸ್ವೈ ರಾಜೀನಾಮೆ ನಿಮಗೆ ಸಂತಸ ತಂದಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, "ಹೌದು, ಇದು ಬಹಳ ದಿನಗಳ ಹಿಂದೆಯೇ ಆಗಬೇಕಿತ್ತು. ಈಗ ವರಿಷ್ಠರು ಆ ಕೆಲಸವನ್ನು ಮಾಡಿದ್ದಾರೆ. ನೋಡಿ, ಬಿಎಸ್ವೈ ರಾಜೀನಾಮೆ ನೀಡಿದ್ದಕ್ಕೆ ಗಡ್ಡ ಬೋಳಿಸಿಕೊಂಡಿದ್ದೇನೆ"ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ಥಾನ ಇರಲಿದೆಯೇ
ಗಡ್ಡ ಬೋಳಿಸುವ ಮೂಲಕ ಯತ್ನಾಳ್ ಅವರು ಯಡಿಯೂರಪ್ಪ ರಾಜೀನಾಮೆಯನ್ನು ಸಂಭ್ರಮಿಸಿದ್ದಾರೆ. ಮುಂದಿನ ಸಂಪುಟದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ಥಾನ ಇರಲಿದೆಯೇ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications