ಯಡಿಯೂರಪ್ಪ ರಾಜೀನಾಮೆಯನ್ನು ವಿಶಿಷ್ಟವಾಗಿ ಆಚರಿಸಿಕೊಂಡ ಯತ್ನಾಳ್
ಬೆಂಗಳೂರು, ಜುಲೈ 28: ಕಳೆದ ಒಂದು ವಾರದ ಬಿರುಸಿನ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.
Recommended Video
ಬುಧವಾರ (ಜುಲೈ 28) ಬೆಳಗ್ಗೆ ಹನ್ನೊಂದು ಗಂಟೆಗೆ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಲ್ಲಿಗೆ, ಬಿಜೆಪಿಯ ಧೀಮಂತ ನಾಯಕ ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ.
ಒಟ್ಟಾರೆಯಾಗಿ, ಬಸವರಾಜ ಬೊಮ್ಮಾಯಿ ಆಯ್ಕೆಗೆ ಪಕ್ಷದಲ್ಲಿ ಸದ್ಯದ ಮಟ್ಟಿಗೆ ಹೆಚ್ಚಿನ ತಕರಾರೇನು ಶಾಸಕರಿಂದ ವ್ಯಕ್ತವಾಗಿಲ್ಲ. ಬೊಮ್ಮಾಯಿ ಆಯ್ಕೆಯ ಮೂಲಕ ಯಡಿಯೂರಪ್ಪನವರ ಕೈಮೇಲಾಗಿರುವುದು ಅತ್ಯಂತ ಸ್ಪಷ್ಟವಾಗಿದೆ.
ಅಲ್ಲಿಗೆ, ಯಡಿಯೂರಪ್ಪನವರನ್ನು ಟೀಕಿಸದೇ ರಾತ್ರಿ ಮಲಗದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿರಾಳರಾಗಿದ್ದಾರೆ. ಬಿಎಸ್ವೈ ರಾಜೀನಾಮೆಯನ್ನು ಯತ್ನಾಳ್ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ.

ಹೊಸ ನಾಯಕನ ಆಯ್ಕೆಗಾಗಿ ಶಾಸಕಾಂಗ ಪಕ್ಷದ ಸಭೆ
ಶಾಸಕಾಂಗ ಪಕ್ಷದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಯತ್ನಾಳ್, "ಬೊಮ್ಮಾಯಿ ಆಯ್ಕೆ ಮೂಲಕ ನಮ್ಮ ಬೇಡಿಕೆ ಈಡೇರಿದೆ. ಯಡಿಯೂರಪ್ಪನವರನ್ನು ಕೆಳಗಿಳಿಸಬೇಕಿತ್ತು, ಆ ಕೆಲಸ ನಡೆದಿದೆ. ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ"ಎಂದು ಅವರು ಹೇಳಿದ್ದಾರೆ.

ಯಡಿಯೂರಪ್ಪನವರ ಬಣದ ಮೇಲುಗೈ ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ
"ಇಲ್ಲಿ ಯಡಿಯೂರಪ್ಪನವರ ಬಣದ ಮೇಲುಗೈ ಎನ್ನುವ ಪ್ರಶ್ನೆ ಉದ್ಭವಿಸುವುದಿಲ್ಲ. ನಾವೆಲ್ಲರೂ ಬಿಜೆಪಿಯವರು. ಯಡಿಯೂರಪ್ಪನವರೇ ರಾಜೀನಾಮೆ ನೀಡಿದ್ದಾರಲ್ವಾ, ಇನ್ನೇನು ಮೇಲುಗೈ. ನಮ್ಮ ಡಿಮಾಂಡ್ ಅನ್ನು ಹೈಕಮಾಂಡ್ ಈಡೇರಿಸಿದ್ದಾರೆ"ಎಂದು ಯತ್ನಾಳ್ ಹೇಳಿದ್ದಾರೆ.

ಬಿಎಸ್ವೈ ರಾಜೀನಾಮೆ ನೀಡಿದ್ದಕ್ಕೆ ಗಡ್ಡ ಬೋಳಿಸಿಕೊಂಡಿದ್ದೇನೆ
ಬಿಎಸ್ವೈ ರಾಜೀನಾಮೆ ನಿಮಗೆ ಸಂತಸ ತಂದಿದೆಯಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, "ಹೌದು, ಇದು ಬಹಳ ದಿನಗಳ ಹಿಂದೆಯೇ ಆಗಬೇಕಿತ್ತು. ಈಗ ವರಿಷ್ಠರು ಆ ಕೆಲಸವನ್ನು ಮಾಡಿದ್ದಾರೆ. ನೋಡಿ, ಬಿಎಸ್ವೈ ರಾಜೀನಾಮೆ ನೀಡಿದ್ದಕ್ಕೆ ಗಡ್ಡ ಬೋಳಿಸಿಕೊಂಡಿದ್ದೇನೆ"ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ಥಾನ ಇರಲಿದೆಯೇ
ಗಡ್ಡ ಬೋಳಿಸುವ ಮೂಲಕ ಯತ್ನಾಳ್ ಅವರು ಯಡಿಯೂರಪ್ಪ ರಾಜೀನಾಮೆಯನ್ನು ಸಂಭ್ರಮಿಸಿದ್ದಾರೆ. ಮುಂದಿನ ಸಂಪುಟದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಸ್ಥಾನ ಇರಲಿದೆಯೇ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications