ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಆಗಸ್ಟ್ 04: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಆಸ್ಪತ್ರೆಯಿಂದಲೇ ಅವರು ಕೆಲಸ ಮಾಡುತ್ತಿದ್ದಾರೆ.

Recommended Video

ಸರ್ಕಾರಿ ಆಸ್ಪತ್ರೆಗಳ ಮೇಲೆ ಸಿದ್ದರಾಮಯ್ಯ, ಯಡಿಯೂರಪ್ಪ ಇಬ್ಬರಿಗೂ ನಂಬಿಕೆ ಇಲ್ಲ | Oneindia Kannada

ಮಂಗಳವಾರ ಮಣಿಪಾಲ್ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಕಡತ ಪರಿಶೀಲನೆ ಮಾಡುತ್ತಿರುವ ಫೋಟೋವನ್ನು ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದೆ. ಯಡಿಯೂರಪ್ಪ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ

'ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರ ನಿಗಾವಹಿಸಿದೆ' ಎಂದು ಆಸ್ಪತ್ರೆಯ ವೈದ್ಯರು ಮಂಗಳವಾರ ತಿಳಿಸಿದ್ದಾರೆ.

ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆಯಿಂದ ಮಾಹಿತಿ ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆಯಿಂದ ಮಾಹಿತಿ

Yediyurappa

ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪಗೆ ಕೋವಿಡ್ ಸೋಂಕು; 75 ಜನರಿಗೆ ಕ್ವಾರಂಟೈನ್ ಯಡಿಯೂರಪ್ಪಗೆ ಕೋವಿಡ್ ಸೋಂಕು; 75 ಜನರಿಗೆ ಕ್ವಾರಂಟೈನ್

ಸೋಮವಾರ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಯಡಿಯೂರಪ್ಪ ಅವರು "ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದಷ್ಟು ಬೇಗ ನಾನು ಗುಣಮುಖನಾಗಿ ಹೊರ ಬಂದು ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ" ಎಂದು ಹೇಳಿದ್ದರು.

English summary
Karnataka chief minister office released the photo B. S. Yediyurappa signing off on files in hospital. Yediyurappa responding to treatment well said doctors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X