ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪಗೆ ಕೋವಿಡ್ ಸೋಂಕು; 75 ಜನರಿಗೆ ಕ್ವಾರಂಟೈನ್

|
Google Oneindia Kannada News

ಬೆಂಗಳೂರು, ಆಗಸ್ಟ್ 04: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿವೆ. ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ 75 ಜನರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಇವರಲ್ಲಿ ಉಪ ಮುಖ್ಯಮಂತ್ರಿಗಳು, ಅಧಿಕಾರಿಗಳು ಸೇರಿದ್ದಾರೆ.

Recommended Video

Ayodhya Rambhoomi ಪೂಜೆಗೆ Karnatakaದ 8 ಮಂದಿಗೆ ಆಹ್ವಾನ | Oneindia Kannada

ಯಡಿಯೂರಪ್ಪಗೆ ಯಾವುದೇ ಸೋಂಕಿನ ಲಕ್ಷಣಗಳು ಇಲ್ಲ. ಆದರೆ, ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಭಾನುವಾರ ರಾತ್ರಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಜೊತೆ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ.

ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ

ಮುಖ್ಯಮಂತ್ರಿಗಳ ಜೊತೆ ಸಂಪರ್ಕದಲ್ಲಿದ್ದ 75 ಜನರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಇವರಲ್ಲಿ ಕುಟುಂಬ ಸದಸ್ಯರು, ಗೃಹ ಕಚೇರಿ ಸಿಬ್ಬಂದಿ, ಉಪ ಮುಖ್ಯಮಂತ್ರಿಗಳು, ಐಎಎಸ್ ಅಧಿಕಾರಿಗಳು ಸೇರಿದ್ದಾರೆ.

ಬಿಎಸ್‌ವೈಗೆ ಕೊರೊನಾ ಸೋಂಕು; ವಿಧಾನಸೌಧ ಕಚೇರಿ ಸೀಲ್ ಡೌನ್ ಇಲ್ಲ ಬಿಎಸ್‌ವೈಗೆ ಕೊರೊನಾ ಸೋಂಕು; ವಿಧಾನಸೌಧ ಕಚೇರಿ ಸೀಲ್ ಡೌನ್ ಇಲ್ಲ

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಡಾ. ಅಶ್ವತ್ಥ ನಾರಾಯಣ, ಗೋವಿಂದ ಕಾರಜೋಳಗೆ ಹೋ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಅಧಿಕಾರಿಗಳು ಕ್ವಾರಂಟೈನ್‌ ಆಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು

ಗೃಹ ಕಚೇರಿಯ ಸಿಬ್ಬಂದಿಗಳು

ಗೃಹ ಕಚೇರಿಯ ಸಿಬ್ಬಂದಿಗಳು

ಯಡಿಯೂರಪ್ಪ ನಿವಾಸ 'ಕಾವೇರಿ', ಗೃಹ ಕಚೇರಿ 'ಕೃಷ್ಣಾ'ದ ಸಿಬ್ಬಂದಿಗಳನ್ನು ಪರೀಕ್ಷೆ ಮಾಡಲಾಗಿದೆ. ಮೊದಲು ಹಂತದಲ್ಲಿ ಪರೀಕ್ಷೆ ಮಾಡಿದ 30 ಸಿಬ್ಬಂದಿ ಪೈಕಿ 6 ಜನರಿಗೆ ಸೋಂಕು ಖಚಿತವಾಗಿದೆ. 45 ಜನರ ವರದಿ ಬರಬೇಕಿದೆ.

75 ಜನರ ಪ್ರಾಥಮಿಕ ಸಂಪರ್ಕ

75 ಜನರ ಪ್ರಾಥಮಿಕ ಸಂಪರ್ಕ

ಯಡಿಯೂರಪ್ಪ ಜೊತೆ ಸಂಪರ್ಕದಲ್ಲಿದ್ದ 75 ಜನರನ್ನು ಗುರುತಿಸಲಾಗಿದೆ. ಇವರಲ್ಲಿ ಕುಟುಂಬ ಸದಸ್ಯರು, ಸಚಿವರು, ಐಎಎಸ್ ಅಧಿಕಾರಿಗಳು, ಕಾರು ಚಾಲಕರು, ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಎಲ್ಲರ ಪರೀಕ್ಷೆ ವರದಿ ಬರುವ ತನಕ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ಶಾಸಕರು, ಸಚಿವರು

ಶಾಸಕರು, ಸಚಿವರು

ಮೂವರು ಉಪ ಮುಖ್ಯಮಂತ್ರಿಗಳು, ಏಳು ಸಚಿವರು, 10 ಶಾಸಕರು ಯಡಿಯೂರಪ್ಪ ಅವರನ್ನು ಒಂದು ವಾರದಲ್ಲಿ ಭೇಟಿಯಾಗಿದ್ದರು. 10 ಹಿರಿಯ ಅಧಿಕಾರಿಗಳ ಜೊತೆ ಯಡಿಯೂರಪ್ಪ ಸಭೆ ನಡೆಸಿದ್ದರು. ಇವರಲ್ಲಿ ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಸಹ ಸೇರಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ

ಆಸ್ಪತ್ರೆಯಲ್ಲಿ ಚಿಕಿತ್ಸೆ

77 ವರ್ಷದ ಬಿ. ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರು ಸಹ ಸೋಮವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

English summary
Karnataka chief minister B. S. Yediyurappa tested positive for COVID 19. 75 people of his primary contacts have been identified and asked to home isolate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X