ವೈಲ್ಡ್ ಕರ್ನಾಟಕ ಕಿರುಚಿತ್ರ ನೋಡಿದ ಯಡಿಯೂರಪ್ಪ
ಬೆಂಗಳೂರು, ಜನವರಿ 28 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ವೈಲ್ಡ್ ಕರ್ನಾಟಕ' ಕಿರುಚಿತ್ರವನ್ನು ವೀಕ್ಷಿಸಿದರು. ಕರ್ನಾಟಕದ ವನ್ಯಜೀವಿ ಸಂಪತ್ತನ್ನು ವಿಶ್ವಕ್ಕೆ ಪರಿಚಯಿಸಲು ಯುವಕರ ತಂಡ ಈ ಕಿರುಚಿತ್ರವನ್ನು ರೂಪಿಸಿದೆ.
ಬೆಂಗಳೂರಿನ ಓರಾಯನ್ ಮಾಲ್ನಲ್ಲಿ ಯಡಿಯೂರಪ್ಪ 'ವೈಲ್ಡ್ ಕರ್ನಾಟಕ' ಕಿರುಚಿತ್ರ ವೀಕ್ಷಿಸಿದರು. ಅರಣ್ಯ ಸಚಿವ ಸಿ. ಸಿ. ಪಾಟೀಲ್, ಅರಣ್ಯ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ವನ್ಯಜೀವಿ ಸಂಪತ್ತನ್ನು ವಿಶ್ವಕ್ಕೆ ಪರಿಚಯಿಸಲು ಯುವಕರ ತಂಡ ಈ ಕಿರುಚಿತ್ರವನ್ನು ರೂಪಿಸಿದೆ. ಭಾರತದ ಪ್ರಥಮ 4ಕೆ ಬ್ಲ್ಯೂ ಚಿಪ್ ಕಿರುಚಿತ್ರ ಎಂಬ ಹೆಗ್ಗಳಿಗೆ ವೈಲ್ಡ್ ಕರ್ನಾಟಕಕ್ಕಿದೆ.

ಅತ್ಯಾಧುನಿಕ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು, ರಾಜ್ಯದ ಮೂಲೆ ಮೂಲೆ ತಿರುಗಾಡಿ ಅಪರೂಪದ ದೃಶ್ಯಾವಳಿಗಳನ್ನು ಸೆರೆ ಹಿಡಿದು ಈ ಕಿರುಚಿತ್ರವನ್ನು ನಿರ್ಮಾಣ ಮಾಡಲಾಗಿದೆ.
ಅಮೋಘವರ್ಷ, ಕಲ್ಯಾಣ ವರ್ಮ, ಶರತ್ ಚಂಪಾಟಿ 'ವೈಲ್ಡ್ ಕರ್ನಾಟಕ' ಕಿರುಚಿತ್ರದ ರೂವಾರಿಗಳು. ಕಿರುಚಿತ್ರದ ಟೀಸರ್ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಕಿರುಚಿತ್ರದ ಚಿತ್ರೀಕರಣಕ್ಕಾಗಿ ಸುಮಾರು ಸುಮಾರು 2 ಕೋಟಿ ವೆಚ್ಚದ ದ್ರೋಣ್ ಬಳಕೆ ಮಾಡಲಾಗಿದೆ.
ಛಾಯಾಗ್ರಹಣವನ್ನು ಹವ್ಯಾಸವನ್ನಾಗಿ ಮಾಡಿಕೊಂಡಿರುವ ಬೆಂಗಳೂರು ಮೂಲದ ಅಮೋಘವರ್ಷ ಕಂಪ್ಯೂಟರ್ ಸೈನ್ಸ್ ಇಂಜಿನಿಯರ್. ಸಂಪೂರ್ಣವಾಗಿ ಛಾಯಾಗ್ರಹಣದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.
-
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
ಮಾರ್ಚ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
LPG ಕೊರತೆಯಿಂದ ಮರಗಳಿಗೆ ಕೊಡಲಿ ಭೀತಿ: ಅಕ್ರಮ ಮರ ಕಡಿತ ತಡೆಯಲು ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಖಡಕ್ ಸೂಚನೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ












Click it and Unblock the Notifications