ಕರ್ನಾಟಕ ಕರಾವಳಿಯಲ್ಲಿ ಜೂನ್ 28ರಿಂದ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜೂನ್ 27; ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಸುರಿಯುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 28ರಿಂದ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 28 ರಿಂದ ಜುಲೈ 1ರ ತನಕ ಧಾರಾಕಾರ ಮಳೆಯಾಗುವ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಿದೆ.

ಜೂನ್ 29ರಿಂದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

 Yellow Alert In Karnataka Karavali District Form June 28 To July 1

ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದಲೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣವಿತ್ತು, ಸಂಜೆಯ ವೇಳೆಗೆ ಕೆಲವು ಬಡಾವಣೆಗಳಲ್ಲಿ ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಪ್ಪ, ಎನ್. ಆರ್. ಪುರ, ಕೊಡಗು, ಮಡಿಕೇರಿ, ನಾಪೊಕ್ಲು, ತಲಕಾವೇರಿ, ಮೈಸೂರು ನಗರದಲ್ಲಿ ಮಳೆಯಾಗಿದೆ.

ಹಾಸನ ಜಿಲ್ಲೆಯ ದ್ಯಾವೇನಹಳ್ಳಿ ಬಳಿ ಹೇಮಾವತಿ ನಾಲೆಯ ಪಂಪ್ ಹೌಸ್ ಸಮೀಪ 80 ಅಡಿ ಎತ್ತರದಿಂದ ನಾಲೆಗೆ ಮಣ್ಣು ಕುಸಿದು ಬಿದ್ದಿದೆ. ಕಾಪು ತಾಲೂಕು ಮೂಳೂರಿನಲ್ಲಿ ಮನೆ ಚಾವಣಿ ಕುಸಿದು ಮಹಿಳೆ ಗಾಯಗೊಂಡಿದ್ದಾರೆ.

ಸೇಡಂ, ಚಿತ್ತಾಪುರ, ಕಾಳಗಿ, ಯಡ್ರಾಮಿ, ಸುರಪುರ, ಕುಷ್ಟಗಿ ಮತ್ತು ಬೀದರ್‌ನಲ್ಲಿಯೂ ಮಳೆಯಾಗಿದೆ. ಗೋಕರ್ಣದಲ್ಲಿ 5, ಕಾರವಾರದಲ್ಲಿ 4, ಶಿರಸಿಯಲ್ಲಿ 3, ಕುಂದಾಪುರ ಮತ್ತು ಪುತ್ತೂರಿನಲ್ಲಿ 2 ಸೆಂ. ಮೀ. ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+