Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಸಿ ಸಿಹಿ ಸುದ್ದಿ
ಬೆಂಗಳೂರು, ಜೂನ್. 07: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಕೂಡ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಲಾಭವಾಗಲಿದೆ.
2003ರಲ್ಲಿ ಈ ಯೋಜನೆ ಆರಂಭಿಸಲಾಯಿತು. ಕಾರನಾಂತರಗಳಿಂದ 2018ರಲ್ಲಿ ಸ್ಥಗಿತವಾಗಿತ್ತು. ಬಳಿಕ ರಾಜ್ಯದ ಸರ್ಕಾರವು 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿತ್ತು. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾರ್ಚ್ 31ರ ವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ, 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆ: ಹೆಚ್ಚಾಯ್ತು ಖಾಸಗಿ ಆಸ್ಪತ್ರೆಗಳ ಸಂಖ್ಯೆ
ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು 300% ವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370 ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.
ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.

ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ
ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications