Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಸಿ ಸಿಹಿ ಸುದ್ದಿ
ಬೆಂಗಳೂರು, ಜೂನ್. 07: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಕೂಡ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಲಾಭವಾಗಲಿದೆ.
2003ರಲ್ಲಿ ಈ ಯೋಜನೆ ಆರಂಭಿಸಲಾಯಿತು. ಕಾರನಾಂತರಗಳಿಂದ 2018ರಲ್ಲಿ ಸ್ಥಗಿತವಾಗಿತ್ತು. ಬಳಿಕ ರಾಜ್ಯದ ಸರ್ಕಾರವು 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿತ್ತು. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾರ್ಚ್ 31ರ ವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ, 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಲಾಗಿದೆ.

ಯಶಸ್ವಿನಿ ಯೋಜನೆ: ಹೆಚ್ಚಾಯ್ತು ಖಾಸಗಿ ಆಸ್ಪತ್ರೆಗಳ ಸಂಖ್ಯೆ
ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು 300% ವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370 ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.
ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.

ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ
ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications