ಸಿಹಿಸುದ್ದಿ; ಯಶವಂತಪುರ-ಮುರುಡೇಶ್ವರ ರೈಲು ವಿಸ್ತರಣೆ
ಬೆಂಗಳೂರು, ಜೂನ್ 28; ಕರ್ನಾಟಕದ ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ವಾರಾಂತ್ಯದಲ್ಲಿ ಸಂಚಾರ ನಡೆಸುತ್ತಿದ್ದ ಯಶವಂತಪುರ-ಮುರುಡೇಶ್ವರ ನಡುವಿನ ವಿಶೇಷ ರೈಲು ಸ್ಥಗಿತಗೊಳಿಸುವ ತೀರ್ಮಾನಿಂದ ಇಲಾಖೆ ಹಿಂದೆ ಸರಿದಿದೆ. ಈ ರೈಲನ್ನು ಜುಲೈ ಅಂತ್ಯದ ತನಕ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.
ಭಾರತೀಯ ರೈಲ್ವೆ ರೈಲು ನಂಬರ್ 06563/ 06564 ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಇದರಿಂದಾಗಿ ಬೆಂಗಳೂರು ಮತ್ತು ಕರಾವಳಿ ಭಾಗಕ್ಕೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ರೈಲು ಸಂಚಾರ ಸ್ಥಗಿತಗೊಳಿಸುವ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ರೈಲು ಸ್ಥಗಿತಗೊಳಿಸಿದರೆ ಹೋರಾಟದ ಎಚ್ಚರಿಕೆ ನೀಡಲಾಗಿತ್ತು.

ಬೆಂಗಳೂರಿನ ಯಶವಂತಪುರ ಮತ್ತು ಮುರುಡೇಶ್ವರ ನಡುವೆ ಸಂಚಾರ ನಡೆಸುವ ರೈಲು ಸಂಪೂರ್ಣ ಭರ್ತಿಯಾಗುತ್ತಿದೆ. ಉತ್ತಮ ವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೂ ಸಹ ರೈಲು ಸೇವೆಯನ್ನು ಏಕೆ ಸ್ಥಗಿತಗೊಳಿಸಲಾಗುತ್ತಿದೆ? ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮತ್ತು ಸಮಾನ ಮನಸ್ಕ ಹೋರಾಟಗಾರರು ಪ್ರಶ್ನೆ ಮಾಡಿದ್ದರು.
ಹೆಚ್ಚುವರಿಯಾಗಿ ಸಂಚಾರ; ರೈಲು ನಂಬರ್ 06563 ಯಶವಂತಪುರ-ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಜುಲೈ ತಿಂಗಳಿನಲ್ಲಿ 1, 8, 15, 22 ಮತ್ತು 29ರಂದು ಸಂಚಾರ ನಡೆಸಲಿದೆ. ರೈಲು ನಂಬರ್ 06564 ಮರುಡೇಶ್ವರ-ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಪ್ರತಿ ರವಿವಾರ ಸಂಚಾರ ನಡೆಸಲಿದೆ ಎಂದು ಪ್ರಕಟಣೆ ಹೇಳಿದೆ.
ಶನಿವಾರ ರಾತ್ರಿ ಬೆಂಗಳೂರು ನಗರದಿಂದ ಹೊರಡುತ್ತಿದ್ದ ರೈಲು ಭಾನುವಾರ ರಾತ್ರಿ ಮರುಡೇಶ್ವರದಿಂದ ವಾಪಸ್ ಹೊರಟು ಬೆಂಗಳೂರು ತಲುಪುತ್ತದೆ. ಆದ್ದರಿಂದ ಬೆಂಗಳೂರು ಮತ್ತು ಕರಾವಳಿ ಭಾಗಕ್ಕೆ ಸಂಚಾರ ನಡೆಸುವ ಜನರಿಗೆ ಇದು ಸಹಕಾರಿಯಾಗಿದೆ. ಮಂಗಳೂರು, ಕುಂದಾಪುರ, ಉಡುಪಿ, ಬೈಂದೂರು ಭಾಗಕ್ಕೆ ಸಂಚಾರ ನಡೆಸುವ ಜನರಿಗೆ ಈ ರೈಲು ಸೇವೆ ಅನುಕೂಲ ಕಲ್ಪಿಸಿದೆ.
ಈ ರೈಲಿನ ಶೇ 100ರಷ್ಟು ಆಸನಗಳು ಸಹ ಭರ್ತಿ ಆಗುತ್ತಿದ್ದವು. ರೈಲು ಮಂಗಳೂರು ನಗರ ನಿಲ್ದಾಣಕ್ಕೆ ತೆರಳುತ್ತಿರಲಿಲ್ಲ ಪಡೀಲ್ ಬೈಪಾಸ್ ಮೂಲಕ ಸಾಗುವ ಕಾರಣ 1 ಗಂಟೆಗೂ ಹೆಚ್ಚು ಸಮಯ ಉಳಿತಾಯವಾಗುತ್ತಿತ್ತು ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಈಗ ರೈಲು ಸೇವೆ ವಿಸ್ತರಣೆ ಮಾಡಿದ್ದಕ್ಕೆ ಇಲಾಖೆಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಮತ್ತೊಂದು ರೈಲು ಬೇಕು ಎಂದು ಜನರು ಬೇಡಿಕೆ ಇಟ್ಟಿದ್ದಾರೆ. ಇಂತಹ ಸಮಯದಲ್ಲಿ ಯಶವಂತಪುರ-ಮುರುಡೇಶ್ವರ ರೈಲು ಸ್ಥಗಿತಗೊಳಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿತ್ತು. ಈ ರೈಲನ್ನು ಶುಕ್ರವಾರವೂ ಸಹ ಓಡಿಸಬೇಕು ಎಂದು ರೈಲು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಆದರೆ ರೈಲ್ವೆ ಇಲಾಖೆ ಈ ಕುರಿತು ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಯಾಣಿಕರ ಬೇಡಿಕೆ; ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ಬೆಂಗಳೂರಿನ ಯಶವಂತಪುರ ಮತ್ತು ಮುರುಡೇಶ್ವರಕ್ಕೆ ವಿಶೇಷ ರೈಲು ಸೇವೆಯನ್ನು 2022ರಲ್ಲಿ ಆರಂಭಿಸಲಾಗಿತ್ತು. ಪ್ರತಿ ಶನಿವಾರ ರಾತ್ರಿ ಬೆಂಗಳೂರಿನಿಂದ ಹೊರಡುವ ರೈಲು ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಮುರುಡೇಶ್ವರದಿಂದ ಭಾನುವಾರ ಮಧ್ಯಾಹ್ನ ಹೊರಡುವ ರೈಲು ಬಂದ ಮಾರ್ಗದಲ್ಲಿಯೇ ವಾಪಸ್ ಆಗಿ ಮರುದಿನ ಬೆಳಿಗ್ಗೆ 4 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಇದೆ. ಆದರೆ ಇದನ್ನು ಖಾಯಂಗೊಳಿಸುವ ಕುರಿತು ಇಲಾಖೆ ಯಾವುದೇ ಆದೇಶವನ್ನು ಹೊರಡಿಸಿಲ್ಲ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು










Click it and Unblock the Notifications