Yettinahole Project update: ಎತ್ತಿನಹೊಳೆ ಯೂಜನೆ ಪೂರ್ಣದ ಗಡುವಿನ ಅಪ್ಡೇಟ್ ಕೊಟ್ಟ ಜಿ.ಪರಮೇಶ್ವರ
ಬೆಂಗಳೂರು, ಡಿಸೆಂಬರ್ 18: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ 'ಎತ್ತಿನಹೊಳೆ ಯೋಜನೆ' (Yettinahole Project) ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಬೆಳಗ್ಗೆ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುಧಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು.
ಸದ್ಯ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ವಿವರಿಸಿದರು.
ವಾಟರ್ ಸ್ಟೋರೆಜ್ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗಧಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ ಎಂದು ಭವಿಷ್ಯದ ಅಕ್ರಮ, ಅಪರಾಧ ಚಟುವಟಿಕೆಗಳ ಕಡಿವಾಣ ಕುರಿತು ಹೇಳಿದರು.
ಇದೇ ವೇಳೆ ತಮ್ಮ ನಿವಾಸದ ಮುಂದೆ ಆಗಮಿಸಿದ್ದ ಸಾರ್ವಜನಿಕರ ಕುಂದು ಕೊರತೆಗಳನ್ನು ಗೃಹ ಸಚಿವ ಜಿ.ಪರಮೇಶ್ವರ ಅವರು ಆಲಿಸಿದರು. ತಮ್ಮ ಬಡಾವಣೆ, ಊರಿನಲ್ಲಿನ ಸಮಸ್ಯೆಗಳು, ಮುಗಿಯದ ವ್ಯಾಜ್ಯ ಸೇರಿದಂತೆ ಅನೇಕ ಕುಂದು ಕೊರತೆಗಳನ್ನು ಸಾರ್ವಜನಿಕರು ಸಚಿವರ ಹೇಳಿಕೊಂಡು ಮನವಿ ಪತ್ರ ನೀಡಿದರು. ಈ ವೇಳೆ ಹತ್ತಾರು ಮಂದಿ ಬೆಳಗ್ಗೆಯಿಂದಲೇ ಸಚಿವರ ಮನೆ ಬಳಿ ಆಗಮಿಸಿದ್ದು ಕಂಡು ಬಂತು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ










Click it and Unblock the Notifications