ಬಿ.ಕೆ.ಎಸ್.ಐಯ್ಯಂಗಾರ್ ನಿಧನಕ್ಕೆ ಮೋದಿ ಸಂತಾಪ
ಬೆಂಗಳೂರು, ಆ.20 :ಯೋಗಗುರು ಬಿ.ಕೆ.ಎಸ್.ಐಯ್ಯಂಗಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಅವರು ಟ್ವಿಟ್ ಮಾಡಿದ್ದಾರೆ.
I am deeply saddened to know about Yogacharya BKS Iyengar's demise & offer my condolences to his followers all over the world.
— Narendra Modi (@narendramodi) August 20, 2014 Generations will remember Shri BKS Iyengar as a fine Guru, scholar & a stalwart who brought Yoga into the lives of many across the world.
— Narendra Modi (@narendramodi) August 20, 2014 ಹಿಂದಿನ ಸುದ್ದಿ : ಕೋಲಾರ ಮೂಲದ ಖ್ಯಾತ ಯೋಗಗುರು ಬಿ.ಕೆ.ಎಸ್.ಐಯ್ಯಂಗಾರ್ ಬುಧವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಮೂತ್ರಕೋಶದ ವೈಫಲ್ಯದಿಂದ ಬಳಲುತ್ತಿದ್ದ ಅವರು, ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ 3.15ರ ಸುಮಾರಿಗೆ ಮೃತಪಟ್ಟಿದ್ದಾರೆ.
ಬೆಳ್ಳೂರು ಕೃಷ್ಣಮಾಚಾರ್ ಸುಂದರರಾಜ ಐಯ್ಯಂಗಾರ್ ಬಿ.ಕೆ.ಎಸ್.ಐಯ್ಯಂಗಾರ್ ಎಂದು ಪ್ರಸಿದ್ಧಿ ಪಡೆದಿದ್ದರು. 96 ವರ್ಷ ವಯಸ್ಸಿನ ಅವರು ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದರು. ಮಂಗಳವಾರ ಅವರನ್ನು ಪುಣೆಯ ಪ್ರಯಾಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಅವರು ವಿಧಿವಶರಾಗಿದ್ದಾರೆ.

ಡಿಸೆಂಬರ್ 14, 1918ರಲ್ಲಿ ಜನಿಸಿದ ಬಿ.ಕೆ.ಎಸ್.ಐಯ್ಯಂಗಾರ್ ಅವರು, ಭಾರತೀಯ ಯೋಗವನ್ನು ಪ್ರಪಂಚದಾದ್ಯಂತ ಪರಿಚಯಿಸಿದ್ದರು. ಯೋಗದ ಕುರಿತು ಹಲವಾರು ಪುಸ್ತಕಗಳನ್ನು ಪ್ರಕಟಿಸಿ ಜನರಿಗೆ ಹೆಚ್ಚಿನ ಅರಿವನ್ನು ಮೂಡಿಸಿದರು. 2014ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ಬಿ.ಕೆ.ಎಸ್.ಐಯ್ಯಂಗಾರ್ ಪಡೆದಿದ್ದರು. [ಬಿ.ಕೆ.ಎಸ್.ಐಯ್ಯಂಗಾರ್ ವೆಬ್ ಸೈಟ್]
1966ರಲ್ಲಿ ಐಯ್ಯಂಗಾರ್ ಅವರು ಬರೆದ ಪ್ರಥಮ ಪುಸ್ತಕ 'Light on Yoga' ಹದಿನೇಳು ಭಾಷೆಗಳಲ್ಲಿ ತರ್ಜುಮೆಗೊಂಡಿದ್ದು, ಸುಮಾರು 10 ಲಕ್ಷ ಪ್ರತಿಗಳು ಮಾರಾಟವಾಗಿದ್ದವು. ಸುಮಾರು ಎಪ್ಪತ್ತು ವರ್ಷಗಳ ಕಾಲ ವಿಶ್ವದ ಯೋಗಾಸಕ್ತರಿಗೆ 'ಪತಾಂಜಲಿ ಯೋಗಮಹಿಮೆಯನ್ನು ಹೇಳಿಕೊಟ್ಟ ಹೆಗ್ಗಳಿಕೆ ಐಯ್ಯಂಗಾರ್ ಅವರದ್ದು. [ಐಯ್ಯಂಗಾರ್ ಗೆ ಶಾಂತಿ ನೊಬೆಲ್ ಯೋಗ?]
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಸಾಮಾನ್ಯ ಮನಸ್ಸಿನಾಚೆಗೆ-ಉಪನಿಷತ್ ದೃಷ್ಟಿಕೋನ: ಬೆಂಗಳೂರಿನಲ್ಲಿ ಶ್ರೀ ಎಂ ವಿಶೇಷ ಉಪನ್ಯಾಸ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications