ಯೋಗೇಶ್ ಗೌಡ ಕೊಲೆ: ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣ ರದ್ದಿಗೆ ಕೋರ್ಟ್ ನಕಾರ
ಬೆಂಗಳೂರು, ಅಕ್ಟೋಬರ್ 19; ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಬಿಜೆಪಿ ಮುಖಂಡರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕೊಲೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಪ್ರಸ್ತುತ ತುಮಕೂರು ಜಿಲ್ಲೆಯ ತಿಪಟೂರಿನ ಎಪಿಎಂಸಿ ಕಾರ್ಯದರ್ಶಿಯಾಗಿರುವ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಅರ್ಜಿದಾರರು ಸಾರ್ವಜನಿಕ ಸೇವಕನಾಗಿದ್ದು, ತನ್ನ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ. ಆದ್ದರಿಂದ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಕರ್ತವ್ಯಗಳು ಅಧಿಕೃತ ಎಂಬ ಅಂಶ ಕಂಡು ಬಂದಲ್ಲಿ ಅವರನ್ನು ವಿಚಾರಣೆಯಿಂದ ಕೈಬಿಡಬಹುದು. ಜತೆಗೆ, ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ವಿಚಾರಣೆ ಮುಂದುವರೆಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಮೇಲ್ನೋಟಕ್ಕೆ ಸಾಕ್ಷ್ಯ ಲಭ್ಯ: ನ್ಯಾಯಪೀಠ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಈ ಆದೇಶ ಮಾಡಿದೆ. ಮೇಲ್ನೋಟಕ್ಕೆ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಿದೆ. ಜತೆಗೆ, ಯೋಗೇಶ್ ಗೌಡ ಅವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳು ರೂಪಿಸಿರುವ ಸಂಚಿನ ಕುರಿತು ಅರ್ಜಿದಾರರಿಗೆ ಅರಿವಿತ್ತು ಎಂದು ವಿಶೇಷ ನ್ಯಾಯಾಲಯ ತಿಳಿಸಿದೆ.
ಜತೆಗೆ, ಶ್ರೀನಿವಾಸ ರೆಡ್ಡಿ ಮತ್ತು ರಾಕೇಶ್ ಶರ್ಮಾ ಮತ್ತಿತರರು ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹೇಳಿರುವಂತೆ, ಸರ್ಕಾರಿ ನೌಕರರಿಗಿರುವ ರಕ್ಷಣೆಯನ್ನು ಕಾನೂನು ಬಾಹಿರ ಕೃತ್ಯಗಳಲ್ಲಿ ಬಳಕೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅಲ್ಲದೆ, ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸಿದ್ದಪಡಿಸುವುದು ಯೋಗೇಶ್ ಗೌಡರ ಕೊಲೆಗೆ ಸಂಚು ರೂಪಿಸಿರುವ ಭಾಗವಾಗಿದೆ. ಜತೆಗೆ ಎಲ್ಲ ಕಾರ್ಯಗಳನ್ನು ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬುದು ತಿಳಿದು ಬಂದಿದ್ದು, ಅರ್ಜಿ ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅರ್ಜಿದಾರರ ಪರ ವಕೀಲರು, ತಮ್ಮ ವಿರುದ್ಧದ ಆರೋಪಗಳು ಸಚಿವಾಗಿದ್ದ ವಿನಯ್ ಕುಲಕರ್ಣಿ ಅವರ ಅಧಿಕೃತ ಕರ್ತವ್ಯದಲ್ಲಿದ್ದು, ನಿರ್ವಹಿಸಿರುವ ಕೆಲಸಗಳಾಗಿವೆ. ಆದರೆ, ಸರ್ಕಾರಿ ಅಧಿಕಾರಿಯಾಗಿರುವುದರಿಂದ ತಮ್ಮ ವಿರುದ್ಧ ಸಕ್ಷಮ ಪ್ರಾಧಿಕಾರ ಪ್ರಾಧಿಕಾರದ ಅನುಮತಿ ಪಡೆಯದ ವಿಚಾಣೆಗೆ ಪರಿಗಣಿಸಿದ್ದು, ಪ್ರಕರಣ ರದ್ದು ಮಾಡಬೇಕು ಎಂದು ಕೋರಿದ್ದರು
ಜತೆಗೆ, ಯೋಗೇಶ್ಗೌಡ ಅವರ ಕೊಲೆ ಸಂದರ್ಭದಲ್ಲಿ ಸಚಿವರು ದೆಹಲಿಯಲ್ಲಿದ್ದರೂ ಎಂಬುದಾಗಿ ಹೇಳಿಕೊಳ್ಳುವುದಕ್ಕಾಗಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದ ನ್ಯಾಮಗೌಡ ಅವರು 2016ರ ಜೂನ್ 12ರಂದು ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸೃಷ್ಟಿಸಿದ್ದರು. ಜತೆಗೆ ಅದೇ ದಿನ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗುವುದಕ್ಕಾಗಿ ತೆರಳುತ್ತಿರುವುದಾಗಿ ವಿಮಾನ ಟಿಕೆಟ್ಗಳನ್ನು ಕಾಯ್ದಿರಿಸಿದ್ದರು ಎಂದು ಸಿಬಿಐ ಆರೋಪಿಸಿತ್ತು.
ಆದರೆ, ಸಭೆಗೆ ಸಂಬಂಧಿಸಿಂತೆ ಕೇಂದ್ರ ಸಚಿವರಿಗೆ ಯಾವುದೇ ಮನವಿಯನ್ನು ರವಾನಿಸಿರಲಿಲ್ಲ. ಜತೆಗೆ, ಅದೇ ಸಂದರ್ಭದಲ್ಲಿ ಕೇಂದ್ರ ಸಚಿವರು ರಾಷ್ಟ್ರ ಮಟ್ಟದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅಲಹಾಬಾದ್ಗೆ ಭೇಟಿ ನೀಡಿದ್ದರು ಎಂದು ಸಿಬಿಐ ತನ್ನ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications