ಎಚ್ಡಿಕೆ ಮೇಲೆ ಯೋಗೇಶ್ವರ್ 30 ಕೋಟಿ ಅಪಪ್ರಚಾರ: ಜೆಡಿಎಸ್ ಸ್ಪಷ್ಟನೆ
ರಾಮನಗರ, ಏ 6: ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಮೂವತ್ತು ಕೋಟಿ ರೂಪಾಯಿ ಆರೋಪಕ್ಕೆ ಜೆಡಿಎಸ್ ಪಕ್ಷ ಸ್ಪಷ್ಟೀಕರಣ ನೀಡಿದೆ.
ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡುತ್ತಿದ್ದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಎಂ ಸಿ ಅಶ್ವಥ್, ಮೂವತ್ತು ಕೋಟಿ ವಿಚಾರ ನಮ್ಮ ಆರೋಪವಲ್ಲ, ಯೋಗೇಶ್ವರ್ ಅವರೇ ಕ್ಷೇತ್ರಾದ್ಯಂತ ಹಬ್ಬಿಸಿದ್ದ ಅಪಪ್ರಚಾರ. ಅದು ಅವರೇ ಹುಟ್ಟಿಸಿದ ಪಾಪದ ಕೂಸು. ಅವರಿಂದ ಜನಿಸಿದ ಈ ಸುಳ್ಳಿಗೆ ಜೆಡಿಎಸ್ ಪಕ್ಷ ಸ್ಪಷ್ಟೀಕರಣ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಇನ್ನೂ ಅಂತಿಮವಾಗದೇ ಇರುವ ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಸಿ.ಪಿ ಯೋಗೇಶ್ವರ್, ಜೆಡಿಎಸ್ ಪಕ್ಷವನ್ನು ನೈತಿಕವಾಗಿ ಕುಗ್ಗಿಸಲು, ದುರ್ಬಲಗೊಳಿಸಲು ಜೆಡಿಎಸ್ ಪಕ್ಷಕ್ಕೆ 30 ಕೋಟಿ ರೂಪಾಯಿ ನೀಡುವ ಅಪಪ್ರಚಾರ ಆರಂಭಿಸಿದ್ದರು ಎಂದು ಅಶ್ವಥ್ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. "ಮೂವತ್ತು ಕೋಟಿ ಕೊಡ್ತೀನಿ, ನನ್ನ ವಿರುದ್ಧ ಡಮ್ಮಿ ಕ್ಯಾಂಡಿಡೇಟ್ ಹಾಕಿ" ಎಂದು ನಾನು ಅವರಲ್ಲಿ ಮನವಿ ಮಾಡಿದ್ದೇನೆ ಅಂತಾ. ಇದು ಶುದ್ಧ ಸುಳ್ಳು. ನಾನೇಕೆ ಕುಮಾರಸ್ವಾಮಿಗೆ ಹಣಕೊಡಲಿ? ಈ ಆರೋಪವನ್ನು ದಾಖಲೆ ಸಮೇತವಾಗಿ ಸಾಬೀತುಪಡಿಸಲಿ ಎಂದು ಯೋಗೇಶ್ವರ್ ಚಾಲೆಂಜ್ ಮಾಡಿದ್ದರು.
ಯೋಗೇಶ್ವರ್ ಅವರ ಈ ಅಪಪ್ರಚಾರಕ್ಕೆ ತಕ್ಕ ಉತ್ತರ ಕೊಡಲು ಮತ್ತು ಚನ್ನಪಟ್ಟಣದ ಮುಖಂಡರ ಒತ್ತಾಯದ ಮೇರೆಗೆ ತಾವೇ ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಘೋಷಿಸಿದರು. ನಂತರ ತಾಲೂಕಿನಲ್ಲಿ ಬೃಹತ್ ಸಮಾವೇಶ ಮಾಡಿ ತಮ್ಮ ಬಲ ಏನು, ತಾಲೂಕಿನ ಜನ ತಮ್ಮ ಮೇಲೆ ಇಟ್ಟ ವಿಶ್ವಾಸವೇನು ಎಂಬುದನ್ನು ಕುಮಾರಸ್ವಾಮಿ ತೋರಿಸಿಕೊಟ್ಟಿದ್ದಾರೆಂದು ಜೆಡಿಎಸ್ ಮುಖಂಡರು ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಕುಮಾರಸ್ವಾಮಿ ಅವರ ವಿರಾಟ್ ದರ್ಶನ ಪಡೆದ ಯೋಗೀಶ್ವರ್ ಈಗ ಕಂಗಾಲಾಗಿದ್ದಾರೆ. ಸೋಲಿನ ಮುನ್ಸೂಚನೆ ಅರಿತು ಕಂಗೆಟ್ಟಿದ್ದಾರೆ. ಹತಾಶರಾಗಿರುವ ಅವರು ಈಗ ತಮ್ಮ ಅಪಪ್ರಚಾರಕ್ಕೆ ಜೆಡಿಎಸ್ ಮುಖಂಡರನ್ನು ಹೊಣೆಗಾರರನ್ನಾಗಿಸಲು ಹೊರಟಿದ್ದಾರೆ.
ಒಂದರ್ಥದಲ್ಲಿ ಮೂವತ್ತು ಕೋಟಿಯ ಅಪಪ್ರಚಾರವೇ ಅವರಿಗೆ ಮುಳುವಾಗಿದೆ ಎಂದು ಜೆಡಿಎಸ್ ಮುಖಂಡ ಅಶ್ವಥ್, ಯೋಗೇಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ.
-
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications