ಎಚ್ಡಿಕೆ ಮೇಲೆ ಯೋಗೇಶ್ವರ್ 30 ಕೋಟಿ ಅಪಪ್ರಚಾರ: ಜೆಡಿಎಸ್ ಸ್ಪಷ್ಟನೆ
ರಾಮನಗರ, ಏ 6: ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಮೂವತ್ತು ಕೋಟಿ ರೂಪಾಯಿ ಆರೋಪಕ್ಕೆ ಜೆಡಿಎಸ್ ಪಕ್ಷ ಸ್ಪಷ್ಟೀಕರಣ ನೀಡಿದೆ.
ಮಾಧ್ಯಮದವರೊಂದಿಗೆ ಶುಕ್ರವಾರ ಮಾತನಾಡುತ್ತಿದ್ದ ಜೆಡಿಎಸ್ ಪಕ್ಷದ ಮಾಜಿ ಶಾಸಕ ಎಂ ಸಿ ಅಶ್ವಥ್, ಮೂವತ್ತು ಕೋಟಿ ವಿಚಾರ ನಮ್ಮ ಆರೋಪವಲ್ಲ, ಯೋಗೇಶ್ವರ್ ಅವರೇ ಕ್ಷೇತ್ರಾದ್ಯಂತ ಹಬ್ಬಿಸಿದ್ದ ಅಪಪ್ರಚಾರ. ಅದು ಅವರೇ ಹುಟ್ಟಿಸಿದ ಪಾಪದ ಕೂಸು. ಅವರಿಂದ ಜನಿಸಿದ ಈ ಸುಳ್ಳಿಗೆ ಜೆಡಿಎಸ್ ಪಕ್ಷ ಸ್ಪಷ್ಟೀಕರಣ ನೀಡುವ ಅಗತ್ಯವೇ ಇಲ್ಲ ಎಂದಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಇನ್ನೂ ಅಂತಿಮವಾಗದೇ ಇರುವ ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಸಿ.ಪಿ ಯೋಗೇಶ್ವರ್, ಜೆಡಿಎಸ್ ಪಕ್ಷವನ್ನು ನೈತಿಕವಾಗಿ ಕುಗ್ಗಿಸಲು, ದುರ್ಬಲಗೊಳಿಸಲು ಜೆಡಿಎಸ್ ಪಕ್ಷಕ್ಕೆ 30 ಕೋಟಿ ರೂಪಾಯಿ ನೀಡುವ ಅಪಪ್ರಚಾರ ಆರಂಭಿಸಿದ್ದರು ಎಂದು ಅಶ್ವಥ್ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ನನ್ನ ಮೇಲೆ ಆರೋಪ ಮಾಡುತ್ತಾರೆ. "ಮೂವತ್ತು ಕೋಟಿ ಕೊಡ್ತೀನಿ, ನನ್ನ ವಿರುದ್ಧ ಡಮ್ಮಿ ಕ್ಯಾಂಡಿಡೇಟ್ ಹಾಕಿ" ಎಂದು ನಾನು ಅವರಲ್ಲಿ ಮನವಿ ಮಾಡಿದ್ದೇನೆ ಅಂತಾ. ಇದು ಶುದ್ಧ ಸುಳ್ಳು. ನಾನೇಕೆ ಕುಮಾರಸ್ವಾಮಿಗೆ ಹಣಕೊಡಲಿ? ಈ ಆರೋಪವನ್ನು ದಾಖಲೆ ಸಮೇತವಾಗಿ ಸಾಬೀತುಪಡಿಸಲಿ ಎಂದು ಯೋಗೇಶ್ವರ್ ಚಾಲೆಂಜ್ ಮಾಡಿದ್ದರು.
ಯೋಗೇಶ್ವರ್ ಅವರ ಈ ಅಪಪ್ರಚಾರಕ್ಕೆ ತಕ್ಕ ಉತ್ತರ ಕೊಡಲು ಮತ್ತು ಚನ್ನಪಟ್ಟಣದ ಮುಖಂಡರ ಒತ್ತಾಯದ ಮೇರೆಗೆ ತಾವೇ ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಘೋಷಿಸಿದರು. ನಂತರ ತಾಲೂಕಿನಲ್ಲಿ ಬೃಹತ್ ಸಮಾವೇಶ ಮಾಡಿ ತಮ್ಮ ಬಲ ಏನು, ತಾಲೂಕಿನ ಜನ ತಮ್ಮ ಮೇಲೆ ಇಟ್ಟ ವಿಶ್ವಾಸವೇನು ಎಂಬುದನ್ನು ಕುಮಾರಸ್ವಾಮಿ ತೋರಿಸಿಕೊಟ್ಟಿದ್ದಾರೆಂದು ಜೆಡಿಎಸ್ ಮುಖಂಡರು ತಿರುಗೇಟು ನೀಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಕುಮಾರಸ್ವಾಮಿ ಅವರ ವಿರಾಟ್ ದರ್ಶನ ಪಡೆದ ಯೋಗೀಶ್ವರ್ ಈಗ ಕಂಗಾಲಾಗಿದ್ದಾರೆ. ಸೋಲಿನ ಮುನ್ಸೂಚನೆ ಅರಿತು ಕಂಗೆಟ್ಟಿದ್ದಾರೆ. ಹತಾಶರಾಗಿರುವ ಅವರು ಈಗ ತಮ್ಮ ಅಪಪ್ರಚಾರಕ್ಕೆ ಜೆಡಿಎಸ್ ಮುಖಂಡರನ್ನು ಹೊಣೆಗಾರರನ್ನಾಗಿಸಲು ಹೊರಟಿದ್ದಾರೆ.
ಒಂದರ್ಥದಲ್ಲಿ ಮೂವತ್ತು ಕೋಟಿಯ ಅಪಪ್ರಚಾರವೇ ಅವರಿಗೆ ಮುಳುವಾಗಿದೆ ಎಂದು ಜೆಡಿಎಸ್ ಮುಖಂಡ ಅಶ್ವಥ್, ಯೋಗೇಶ್ವರ್ ಅವರಿಗೆ ತಿರುಗೇಟು ನೀಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications