ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಚುನಾವಣೆ ಪ್ರಚಾರಕ್ಕೆ ಯೋಗಿ ಕರೆತರಲು ಬಿಜೆಪಿ ತಂತ್ರ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಮೇ 22: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ನೂರೈವತ್ತು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿಯು ಅದಕ್ಕಾಗಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರ ನೆರವು ಪಡೆಯುವುದಕ್ಕೆ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಚುನಾವಣೆಯ ಸ್ಟಾರ್ ಪ್ರಚಾರಕರು ಎಂಬುದರಲ್ಲಿ ಯಾವುದೇ ಬದಲಾವಣೆಯಿಲ್ಲ.

ಜತೆಗೆ ಯೋಗಿಯೂ ಇರಲಿ ಎಂಬುದು ಸದ್ಯಕ್ಕೆ ಕೇಳಿಬರುತ್ತಿರುವ ಸುದ್ದಿ. ಚುನಾವಣೆ ಪ್ರಚಾರಕ್ಕೆ ಕರ್ನಾಟಕಕ್ಕೆ ಬನ್ನಿ ಎಂದು ಯೋಗಿ ಆದಿತ್ಯನಾಥ್ ರನ್ನು ಈಗಾಗಲೇ ಪಕ್ಷದಿಂದ ಮನವಿ ಕೂಡ ಮಾಡಲಾಗಿದೆ. ಇತ್ತೀಚೆಗೆ ನಡೆದ ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ.[RSS ಇಲ್ಲದಿದ್ರೆ ಕಾಶ್ಮೀರ, ಪಾಕಿಸ್ತಾನದ ಪಾಲಾಗುತ್ತಿತ್ತು: ಯೋಗಿ]

Yogi will help Karnataka BJP realise "Mission 150" in assembly polls

ಆ ನಂತರ ಪಕ್ಷದಲ್ಲಿ ಆಂತರಿಕ ಭಿನ್ನಮತ ಕೂಡ ಕಾಣಿಸಿಕೊಂಡಿದೆ. ಎಲ್ಲದರಿಂದ ಮೈಕೊಡವಿ ಎದ್ದು ನಿಂತು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನೂರೈವತ್ತು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಳ್ಳಬೇಕು ಎಂಬ ಗುರಿಗೆ ಯೋಗಿ ಆದಿತ್ಯನಾಥ್ ರಿಂದ ಸಹಾಯವಾಗುತ್ತದೆ ಎಂಬ ನಿರೀಕ್ಷೆ ಇದೆ.[ತಿವಾರಿ ಸಾವಿನ ಕೇಸ್, ಶೋಭಾ ಮನವಿ ಪುರಸ್ಕರಿಸಿದ ಸಿಎಂ ಯೋಗಿ]

ಯೋಗಿ ಚುನಾವಣಾ ಪ್ರಚಾರಕ್ಕೆ ಧುಮುಕಿದರೆ ಸಂಚಲನಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಮತ ಸೆಳೆಯಲು ನೆರವಾಗುತ್ತದೆ ಎಂಬುದು ರಾಜ್ಯ ಬಿಜೆಪಿಯ ಲೆಕ್ಕಾಚಾರ. ಆದರೆ ಅಂತಿಮ ತೀರ್ಮಾನ ಆಗಬೇಕಿದೆ. ಆದರೆ ಈ ಉಪಾಯಕ್ಕೆ ಕೇಂದ್ರ ನಾಯಕರು ಇಲ್ಲ ಎನ್ನಲಾರರು ಎಂಬ ಅಚಲ ವಿಶ್ವಾಸ ರಾಜ್ಯನಾಯಕರಿಗಿದೆ.

English summary
In a bid to realise its 'Mission 150' dream in the Karnataka legislative assembly elections next year, the BJP has decided to rope in Uttar Pradesh Chief Minister, Yogi Adityanath. While Prime Minister Narendra Modi would be the star campaigner for the party, the BJP plans to go the extra mile and in order to do so, it has requested that Yogi be part of the campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X