ಕಂಬಳ ನಿಷೇಧ ತೆರವು; ಎರಡು ವಾರ ವಿಚಾರಣೆ ಮುಂದೂಡಿದ ಹೈಕೋರ್ಟ್
ಕಂಬಳ ತೆರವಿಗಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ. ಸುಪ್ರಿಂ ಕೋರ್ಟಿನ ಜಲ್ಲಿಕಟ್ಟು ಆದೇಶವನ್ನು ಕಾದು ನೋಡುವಂತೆ ಕಂಭಲ ಸಮಿತಿಯವರಿಗೆ ಹೇಳಿದೆ.
ಬೆಂಗಳೂರು, ಜನವರಿ 30: ಕಂಬಳದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಕಾಲ ಮುಂದೂಡಿದೆ. ಜಲ್ಲಿಕಟ್ಟು ಕ್ರೀಡೆಯ ಮೇಲೆ ಸುಪ್ರಿಂ ಕೋರ್ಟಿನಲ್ಲಿರುವ ತಡೆ ಆದೇಶ ಏನಾಗಲಿದೆ ಎಂಬುದನ್ನು ಕಾದು ನೋಡುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ನೇತೃತ್ವದ ನ್ಯಾಯಪೀಠ ಅರ್ಜಿದಾರರಿಗೆ ಸೂಚಿಸಿದೆ.
ಕಂಬಳದಲ್ಲಿ ಕೋಣಗಳಿಗೆ ಹಿಂಸೆ ನೀಡುವುದಿಲ್ಲ ಎಂಬ ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ, "ಕೋಣಗಳ ಬದಲು ನಿಮ್ಮನ್ನು ಓಡುವಂತೆ ಮಾಡಬೇಕು," ಎಂದು ಚಟಾಕಿ ಹಾರಿಸಿದರು. ವಿಚಾರಣೆ ಮುಂದೂಡುವ ಮೊದಲು 'ಓಟಕ್ಕೆ ಮೊದಲು ಕೋಣಗಳ ಮೇಲೆ ಮೆಣಸಿನ ಪುಡಿ ಎರಚಲಾಗುತ್ತದೆ,' ಎಂಬುದನ್ನೂ ಮುಖರ್ಜಿ ಪ್ರಸ್ತಾಪಿಸಿದ್ದಾರೆ.[ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?]

2014ರಲ್ಲಿ ಕಂಬಳವನ್ನೂ ಸೇರಿಸಿ ಸುಪ್ರಿಂ ಕೋರ್ಟ್ ಪ್ರಾಣಿಗಳನ್ನು ಬಳಸುವ ಕ್ರೀಡೆಗಳಿಗೆ ನಿಷೇಧ ಹೇರಿತ್ತು. ನಂತರ 2015ರಲ್ಲಿ ಕರ್ನಾಟಕ ಹೈಕೋರ್ಟ್ ಕಂಬಳ ನಡೆಸಲು ಷರತ್ತು ಬದ್ದ ಅವಕಾಶ ನೀಡಿತ್ತು. ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಪೇಟಾ, ಕಂಬಳ ಕಾನೂನು ಬಾಹಿರ ಎಂದು ಮತ್ತೆ 2016ರಲ್ಲಿ ಹೈ ಕೋರ್ಟ್ ಮೊರೆ ಹೋಗಿತ್ತು. ಆ ಸಂದರ್ಭದಲ್ಲಿ ಕಂಬಳಕ್ಕೆ ಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಈ ತಡೆ ತೆರವುಗೊಳಿಸುವಂತೆ ಸಮಿತಿ ಈಗ ಹೈಕೋರ್ಟ್ ಮೊರೆ ಹೋಗಿದೆ.[ಇದು ಕಂಬಳದ ಅನಭಿಷಕ್ತ ದೊರೆಯ ಇಂಟೆರೆಸ್ಟಿಂಗ್ ಕಥೆ..!]
ಇದೀಗ ವಿಭಾಗಿಯ ಪೀಠ ಅರ್ಜಿದಾರರಿಗೆ ಎರಡು ವಾರಗಳ ಕಾಲ ಕಾಯಲು ಸೂಚಿಸಿದೆ. ಸುಪ್ರಿಂ ಕೋರ್ಟ್ ಜಲ್ಲಿಕಟ್ಟಿಗೆ ಸಂಬಂಧಿಸಿದಂತೆ ನೀಡುವ ಆದೇಶ ನೋಡಿಕೊಂಡು ಮರಳಿ ಬರುವಂತೆ ಪೀಠ ಹೇಳಿದೆ. (ಒನ್ ಇಂಡಿಯಾ ಸುದ್ದಿ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications