ಮಾಜಿ ಪ್ರೇಯಸಿ ಸತ್ತಳೆಂದು ನೇಣು ಹಾಕಿಕೊಂಡ,ಆಕೆ ಬದುಕಿದಳು
ಚಿಕ್ಕಬಳ್ಳಾಪುರ, ಮಾ.11 : ಮಾಜಿ ಪ್ರೇಯಸಿಯನ್ನು ಕೊಂದೆನೆಂದು ಹೆದರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆದರೆ, ಆತನ ಮಾಜಿ ಪ್ರೇಯಸಿ ಬದುಕಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ರಾಮಕೃಷ್ಣ (26) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ ಗುಡಿಬಂಡೆಯ ಮೇಡಿಮಾಕಲಹಳ್ಳಿ ನಿವಾಸಿಯಾದ ರಾಮಕೃಷ್ಣ ಮಾಜಿ ಪ್ರೇಯಸಿಗೆ ಒನಕೆಯಿಂದ ಹೊಡೆದು ಆಕೆಯನ್ನು ಕೊಲ್ಲಲು ಪ್ರಯತ್ನ ನಡೆಸಿದ್ದ.
ಘಟನೆಯ ವಿವರ ಇಲ್ಲಿದೆ : ರಾಮಕೃಷ್ಣ ತನ್ನ ಗ್ರಾಮದ ಯುವತಿಯನ್ನು 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಈ ವಿಷಯ ತಿಳಿದ ಮನೆಯವರು ಇಬ್ಬರ ವಿವಾಹ ನಿಶ್ಚಯ ಮಾಡಿದ್ದರು. ಆದರೆ, ಮದುವೆ ನಿಂತು ಹೋಗಿತ್ತು. ಕೆಲವು ದಿನಗಳ ಬಳಿಕ ಯುವತಿಯ ಮನೆಯವರು ಆಕೆಗೆ ಬೇರೆ ವಿವಾಹ ಮಾಡಿದ್ದರು.

ಮಾಜಿ ಪ್ರೇಯಸಿಗೆ ಮದುವೆಯಾದ ಬಳಿಕ ಬೆಂಗಳೂರಿಗೆ ಹೋಗಿದ್ದ ರಾಮಕೃಷ್ಣ ಅಲ್ಲಿಯೇ ಕೆಲಸ ಮಾಡಿಕೊಂಡಿದ್ದ. ಆದರೆ, ಇಬ್ಬರ ನಡುವೆ ದೂರವಾಣಿ ಮಾತುಕತೆ ನಡೆಯುತ್ತಿತ್ತು. ಇದು ಕುಟುಂಬದವರಿಗೆ ತಿಳಿದು ರದ್ದಾಂತವಾಗಿತ್ತು. ರಾಮಕೃಷ್ಣನಿಗೆ ಮನೆಯವರು ಎಚ್ಚರಿಕೆಯನ್ನು ನೀಡಿದ್ದರು. [ಮೈಸೂರು : ಸತ್ತಂತೆ ನಾಟಕವಾಡಲು ಹೋಗಿ ಹೆಣವಾದ]
ಕೊಲೆ ಮಾಡಲು ಯತ್ನಿಸಿದ : ಮಾಜಿ ಪ್ರೇಯಸಿ ಗ್ರಾಮಕ್ಕೆ ಬಂದಿರುವ ಸುದ್ದಿ ತಿಳಿದು ಸೋಮವಾರ ರಾಮಕೃಷ್ಣ ಮೇಡಿಮಾಕಲಹಳ್ಳಿ ಗ್ರಾಮಕ್ಕೆ ಬಂದಿದ್ದ. ಮಂಗಳವಾರ ಮಾಜಿ ಪ್ರೇಯಸಿಯ ಮನೆಗೆ ನುಗ್ಗಿದ ಆತ ಒನಕೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದ. [ಮಂಗಳೂರು : ಹಾವು ಹಿಡಿಯಲು ಹೋಗಿ ಸಾವು ತಂದುಕೊಂಡ]
ಮಾಜಿ ಪ್ರೇಯಸಿ ರಕ್ತದ ಮಡುವಿನಲ್ಲಿ ಬಿದ್ದ ತಕ್ಷಣ ಆಕೆ ಸತ್ತಳೆಂದು ಆತಂಕಗೊಂಡ ರಾಮಕೃಷ್ಣ ಅವರ ಮನೆಯಲ್ಲಿಯೇ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ಈ ವಿಷಯ ತಿಳಿದು ಮನೆಗೆ ಬಂದು ನೋಡಿದಾಗ ಹಲ್ಲೆಗೊಳಾದವಳು ಬದುಕಿದ್ದಳು.
ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ಗೆ ಸೇರಿಸಲಾಗಿದೆ. ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications