ಟಿವಿಗಳ ಸುಳ್ಳು ಸುದ್ದಿಗೆ ಟ್ವೀಟ್ ಬಾಣ ಬಿಟ್ಟ ದತ್ತಾ!
ಬೆಂಗಳೂರು, ಡಿಸೆಂಬರ್ 01 : "ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?, ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ" ಎಂದು ಜೆಡಿಎಸ್ ನಾಯಕ ವೈ. ಎಸ್. ವಿ. ದತ್ತಾ ಟಿವಿಗಳ ಸುಳ್ಳುಸುದ್ದಿಗೆ ಟ್ವೀಟ್ ಬಾಣ ಬಿಟ್ಟಿದ್ದಾರೆ.
ಕಡೂರು ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ನಾಯಕ ವೈ. ಎಸ್. ವಿ. ದತ್ತಾ ಮಂಗಳವಾರ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ದತ್ತಾ ಅವರು ಜೆಡಿಎಸ್ ಪಕ್ಷ ತೊರೆಯಲಿದ್ದಾರೆ ಎಂಬ ಕೆಲವು ಟಿವಿ ವಾಹಿನಿಗಳ ಸುದ್ದಿಗಳಿಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ವೈ. ಎಸ್. ವಿ. ದತ್ತಾ, "ಮೊನ್ನೆ ಪಕ್ಷ ಸಂಘಟನೆ ಬಗ್ಗೆ, ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ" ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

"ನಿನ್ನೆ ರಾತ್ರಿ ತಾನೇ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು, ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ" ಎಂದು ಟ್ವೀಟ್ನಲ್ಲಿ ವೈ. ಎಸ್. ವಿ. ದತ್ತಾ ಸ್ಪಷ್ಟನೆಯನ್ನು ನೀಡಿದ್ದಾರೆ.
"ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ" ಎಂದು ಟ್ವೀಟ್ನಲ್ಲಿ ದತ್ತಾ ಹೇಳಿದ್ದಾರೆ.
ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?? ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ. @JanataDal_S ಪಕ್ಷ ಸಂಘಟನೆ ಕಡೆ ಗಮನ ಕೊಡೋಣ.ಮೊನ್ನೆ ಪಕ್ಷ ಸಂಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ. 2/2
— YSV Datta (@YSV_Datta) December 1, 2020
2018ರ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ವೈ. ಎಸ್. ವಿ. ದತ್ತಾ 46,860 ಮತಗಳನ್ನು ಪಡೆದು ಬಿಜೆಪಿಯ ಕೆ. ಎಸ್. ಪ್ರಕಾಶ್ ವಿರುದ್ಧ ಸೋಲು ಕಂಡಿದ್ದಾರೆ. ಅಂದಿನಿಂದಲೂ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಪ್ರತಿ ಬಾರಿಯೂ ದತ್ತಾ ಈ ಸುದ್ದಿಗಳಿಗೆ ಸ್ಪಷ್ಟನೆಯನ್ನು ಕೊಡುತ್ತಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications