ಹೆದ್ದಾರಿಯಲ್ಲೇ ಕನ್ನಡ ನಟನ ಮೇಲೆ ಹಲ್ಲೆಗೆ ಯತ್ನ
ಬೆಂಗಳೂರು-ಮೈಸೂರು ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಯುಗಪುರುಷ ಚಿತ್ರದ ನಾಯಕ ನಟ ಅರ್ಜುನ್ದೇವ್ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ.
ರಾಮನಗರ, ಮೇ 30: ಬೆಂಗಳೂರು-ಮೈಸೂರು ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಯುಗಪುರುಷ ಚಿತ್ರದ ನಾಯಕ ನಟ ಅರ್ಜುನ್ದೇವ್ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ.
ರಾಮನಗರಕ್ಕೆ ತೆರಳುತ್ತಿದ್ದ ನಟ ಅರ್ಜುನ್ ದೇವ್ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಿ, ಕಾರಿನ ಗಾಜು ಪುಡಿಪುಡಿ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕೆಎ 56 ಎಂ 6669 ಅಡಿ ರಿಜಿಸ್ಟರ್ ಆಗಿರುವ ಹ್ಯುಂಡೈ ಐ20 ಕಾರಿನಲ್ಲಿ ಬೆಂಗಳೂರಿನಿಂದ ರಾಮನಗರಕ್ಕೆ ಅರ್ಜುನ್ ದೇವ್ ಮಂಗಳವಾರ(ಮೇ 30)ದಂದು ಬೆಳಗ್ಗೆ ಪ್ರಯಾಣ ಆರಂಭಿಸಿದರು.

ರಾಮನಗರ ಜಿಲ್ಲಾ ಕೋರ್ಟ್ ಕಛೇರಿ ಮುಂಭಾಗ ಎಸ್ಬಿಎಂ ಬ್ಯಾಂಕ್ ಬಳಿ ಕಾರಿನಲ್ಲಿ ಅರ್ಜುನ್ ದೇವ್ ಅವರು ಸಾಗುತ್ತಿದ್ದಾಗ ಅವರ ಕಾರಿನ ಮೇಲೆ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು, ರಾಡ್ ನಿಂದ ಕಾರಿನ ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ನಟ ಅರ್ಜುನ್ ಹಾಜರಾಗಬೇಕಿತ್ತು. ಈ ಹಿನ್ನೆಲೆಯಲ್ಲಿ ಈ ಮಾರ್ಗವಾಗಿ ರಾಮನಗರಕ್ಕೆ ತೆರಳುತ್ತಿದ್ದರು. ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications