ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆದ್ದಾರಿಯಲ್ಲೇ ಕನ್ನಡ ನಟನ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು-ಮೈಸೂರು ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಯುಗಪುರುಷ ಚಿತ್ರದ ನಾಯಕ ನಟ ಅರ್ಜುನ್‍ದೇವ್ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ.

By Mahesh
|
Google Oneindia Kannada News

ರಾಮನಗರ, ಮೇ 30: ಬೆಂಗಳೂರು-ಮೈಸೂರು ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಯುಗಪುರುಷ ಚಿತ್ರದ ನಾಯಕ ನಟ ಅರ್ಜುನ್‍ದೇವ್ ಮೇಲೆ ಹಲ್ಲೆಗೆ ಯತ್ನ ನಡೆಸಲಾಗಿದೆ.

ರಾಮನಗರಕ್ಕೆ ತೆರಳುತ್ತಿದ್ದ ನಟ ಅರ್ಜುನ್ ದೇವ್ ಅವರಿದ್ದ ಕಾರಿನ ಮೇಲೆ ದಾಳಿ ನಡೆಸಿ, ಕಾರಿನ ಗಾಜು ಪುಡಿಪುಡಿ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೆಎ 56 ಎಂ 6669 ಅಡಿ ರಿಜಿಸ್ಟರ್ ಆಗಿರುವ ಹ್ಯುಂಡೈ ಐ20 ಕಾರಿನಲ್ಲಿ ಬೆಂಗಳೂರಿನಿಂದ ರಾಮನಗರಕ್ಕೆ ಅರ್ಜುನ್ ದೇವ್ ಮಂಗಳವಾರ(ಮೇ 30)ದಂದು ಬೆಳಗ್ಗೆ ಪ್ರಯಾಣ ಆರಂಭಿಸಿದರು.

Yugapurusha film Actor Arjun Dev attacked Aijooru Ramanagara

ರಾಮನಗರ ಜಿಲ್ಲಾ ಕೋರ್ಟ್ ಕಛೇರಿ ಮುಂಭಾಗ ಎಸ್‍ಬಿಎಂ ಬ್ಯಾಂಕ್ ಬಳಿ ಕಾರಿನಲ್ಲಿ ಅರ್ಜುನ್ ದೇವ್ ಅವರು ಸಾಗುತ್ತಿದ್ದಾಗ ಅವರ ಕಾರಿನ ಮೇಲೆ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು, ರಾಡ್ ನಿಂದ ಕಾರಿನ ಗಾಜು ಒಡೆದು ಪುಡಿ ಪುಡಿ ಮಾಡಿದ್ದಾರೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ನಟ ಅರ್ಜುನ್ ಹಾಜರಾಗಬೇಕಿತ್ತು. ಈ ಹಿನ್ನೆಲೆಯಲ್ಲಿ ಈ ಮಾರ್ಗವಾಗಿ ರಾಮನಗರಕ್ಕೆ ತೆರಳುತ್ತಿದ್ದರು. ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

English summary
Yugapurusha Kannada film actor Arjun Dev today(May 30) attacked by miscreants on the Mysuru-Bengaluru highway near Aijooru in Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X