Yuva Nidhi Scheme 2025: ಯುವನಿಧಿ ಯೋಜನೆಯಲ್ಲಿ ಮಹತ್ವದ ಬದಲಾವಣೆ, ಹೊಸ ನಿಯಮವೇನು ?
Yuva Nidhi Scheme 2025: ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆಯೂ ಒಂದಾಗಿದೆ. ಇದೀಗ ಕರ್ನಾಟಕ ಸರ್ಕಾರವು ಯುವನಿಧಿ ಯೋಜನೆಯಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಯುವನಿಧಿ ಯೋಜನೆ; ಫಲಾನುಭವಿಗಳ ಸ್ವಯಂ ಘೋಷಣೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಯುವನಿಧಿ' ಯೋಜನೆಯ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸ್ವಯಂ ಘೋಷಣೆಯನ್ನು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು ಧೃಢೀಕರಿಸಿಕೊಳ್ಳಬೇಕು.

ಯುವನಿಧಿ ಯೋಜನೆಯ ಡಿಬಿಟಿಯನ್ನು ಸತತ 6 ತಿಂಗಳು ಪಡೆಯುತ್ತಿರುವ ಫಲಾನುಭವಿಗಳು ತರಬೇತಿಯನ್ನು ಪಡೆಯಲು https://www.kaushalkar.com ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೋಂದಾಸಿಕೊಳ್ಳಬೇಕು. ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆಯ ಡಿ.ಬಿ.ಟಿಯನ್ನು ನಿಲ್ಲಿಸಲಾಗುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂಲಕ ಪ್ರತಿ ತಿಂಗಳೂ ಯುವನಿಧಿ ಯೋಜನೆಯ ಫಲಾನುಭವಿಗಳು ಸ್ವಯಂ ಘೋಷಣೆ ಮಾಡಿಕೊಳ್ಳುವ ಅವಶ್ಯಕತೆ ಇದೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ?
ಇನ್ನು ಯುವನಿಧಿ ಯೋಜನೆಗೆ ನೀವು ಅರ್ಜಿ ಸಲ್ಲಿಸುವುದಕ್ಕೆ ಇಚ್ಛಿಸಿದಲ್ಲಿ ನೀವು ಮೊದಲು ಕರ್ನಾಟಕದ ನಿವಾಸಿಯಾಗಿರಬೇಕು. ನಿರುದ್ಯೋಗಿ ಆಗಿದ್ದು, ಉನ್ನತ ಶಿಕ್ಷಣಕ್ಕಾಗಿ ಈ ಸೌಲಭ್ಯ ಇರುವುದಿಲ್ಲ. ಈ ಯೋಜನೆಗೆ ಅರ್ಜಿ ಸಲ್ಲಿಸುವುದಿದ್ದರೆ ನಿಮ್ಮ ಹೆಸರಿನಲ್ಲಿ ಅಥವಾ ನೀವು ಇಎಸ್ಐ ಅಥವಾ ಪಿಎಫ್ ಸೌಲಭ್ಯಗಳನ್ನು ಪಡೆಯುತ್ತಿರಬಾರದು.
ಆಧಾರ್ ಕಾರ್ಡ್ ಇ ಕೆವೈಸಿ: ಇನ್ನು ಎರಡನೇ ಹಂತವಾಗಿ ನೀವು ಆಧಾರ್ ಕಾರ್ಡ್ ಇ - ಕೆವೈಸಿ ಮಾಡಿಸಬೇಕು. ಇದು ನೀವು ಕರ್ನಾಟಕದ ನಿವಾಸಿ ಹಾಗೂ ನಿಮ್ಮ ಹೆಸರು, ವಿಳಾಸ ಸೇರಿದಂತೆ ಪ್ರಾಥಮಿಕ ಮಾಹಿತಿಯನ್ನು ಖಚಿತಪಡಿಸುತ್ತದೆ.
ಶೈಕ್ಷಣಿಕ ಮಾಹಿತಿ ವಿವರಗಳು: ಮೂರನೇ ಹಂತದಲ್ಲಿ ನಿಮ್ಮ ಶೈಕ್ಷಣಿಕ ದಾಖಲೆಗಳನ್ನು ಇಲ್ಲಿ ಸಲ್ಲಿಕೆ ಮಾಡಬೇಕಾಗುತ್ತದೆ. ನೀವು ವಿದ್ಯಾಭ್ಯಾಸ ಮಾಡುತ್ತಿರುವ ವಿಶ್ವ ವಿದ್ಯಾಲಯ, ಕಾಲೇ ಜು ವಿವರವನ್ನು ನಮೂದಿಸಬೇಕು. ಅಲ್ಲದೇ Unique Identification Number / ರಿಜಿಸ್ಟರ್ ನಂಬರ್ ಸಂಖ್ಯೆ ನಮೂದಿಸಬೇಕು.
ಅಂತಿಮವಾಗಿ ಎಸ್ಎಂಎಸ್ ಅಥವಾ ಇ - ಮೇಲ್ ಮೂಲಕ ಒಟಿಪಿ ನಮೂದಿಸಿ. ಈ ಮಾಹಿತಿಯನ್ನು ದೃಢೀಕರಿಸುತ್ತೇನೆ ಎನ್ನುವ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications